ಹಾಸನದಲ್ಲಿ ಸಚಿವ ರೇವಣ್ಣ ಆಪ್ತರ ಮನೆಗಳ ಮೇಲೂ ಐಟಿ ದಾಳಿ!

ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹಾಸನ: ಸಿಎಂ ಆಪ್ತ ಸಿಎಸ್ ಪುಟ್ಟರಾಜು ಅವರ ಆಪ್ತರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗಿರುವಂತೆಯೇ ಅತ್ತ ಸಚಿವ ಎಚ್ ಡಿ ರೇವಣ್ಣ ಆಪ್ತರಿಗೂ ಐಟಿ ಅಧಿಕಾರಿಗಳು ಶಾಕ್ ನೀಡಿದ್ದಾರೆ.
ಎಚ್ ಡಿ ರೇವಣ್ಣ ಅವರ ಮೂವರು ಆಪ್ತರಿಗೆ ಸೇರಿದೆ ಎನ್ನಲಾದ 10ಕ್ಕೂ ಹೆಚ್ಚು ಮನೆ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ರೇವಣ್ಣ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗುತ್ತಿಗೆದಾರರಾದ ನಾರಾಯಣ ರೆಡ್ಡಿ, ಅಶ್ವತ್, ರಾಯಗೌಡ ಅವರ ಹಾಸನದ ಮನೆಗಳ ಮೇಲೆ ದಾಳಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅವರ ಮನೆಗಳು ಮಾತ್ರವಲ್ಲದೇ ಅವರ ಬೆಂಬಲಿಗರ ಮನೆಗಳ ಮೇಲೂ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ರಾಯಗೌಡ ಅವರ ಚೆನ್ನರಾಯಪಟ್ಟಣದ ನಿವಾಸವೂ ಸೇರಿದಂತೆ ಒಟ್ಟು 10 ಕಡೆಗಳಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. ಮಂಡ್ಯದಲ್ಲಿ ದಾಳಿ ಮಾಡಿದ ಐಟಿ ಅಧಿಕಾರಿಗಳ ಮತ್ತೊಂದು ತಂಡವೇ ಈ ದಾಳಿ ಮಾಡಿದ್ದು, ಸುಮಾರು 10 ಕಡೆಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com