ಬೆಂಗಳೂರು: ನಗರದ ವಿವಿಧ ಠಾಣೆಗಳ 20 ಸರಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ಕುಖ್ಯಾತ ಅಂತರಾಜ್ಯ ಕಳ್ಳರನ್ನು ಬಂಧಿಸಿ, 600 ಗ್ರಾಂ ತೂಕದ ಚಿನ್ನದ ಒಡವೆ ಹಾಗೂ ಒಂದು ಡ್ಯೂಕ್ ಬೈಕ್ ಅನ್ನು ವಶಪಡಿಸಿಕೊಳ್ಳುವಲ್ಲಿ ವಿದ್ಯಾರಣ್ಯಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಂಬೈ ಠಾಣಾ ಮೂಲದ ಮಹಮ್ಮದ್ ಅಲಿ (23), ಸಯ್ಯದ್ ಕರಾರ್ ಹಸೇನ್ (37) ಬಂಧಿತ ಆರೋಪಿಗಳು.