ಕೃಷಿ ಸಾಧನೆಗಾಗಿ ಕೇಂದ್ರ ಸರ್ಕಾರದ 'ಕೃಷಿ ಪಂಡಿತ್' ಪ್ರಶಸ್ತಿ ಸ್ವೀಕರಿಸಿದ್ದ ಅವರು, ಕೃಷಿ ಜ್ಞಾನವನ್ನು ಹೆಚ್ಚಿಸಿಕೊಳ್ಳಲು ಹೊಸದಿಲ್ಲಿ, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಮಹಾರಾಷ್ಟ್ರ, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ವ್ಯಾಪಕ ಪ್ರವಾಸ ಮಾಡಿದ್ದರು. ಆಕಾಶವಾಣಿಯ ಕೃಷಿ ದರ್ಶನ್ ಕಾರ್ಯಕ್ರಮದಲ್ಲಿ ಅವರು ನಿಯಮಿತವಾಗಿ ಪಾಲ್ಗೊಂಡಿದ್ದರು. 20 ಕ್ಕಿಂತಲೂ ಹೆಚ್ಚು ರಾಷ್ಟ್ರೀಯ ಕೃಷಿ ವಿಚಾರ ಸಂಕಿರಣದಲ್ಲಿ ಭಾಗಿಯಾಗಿ ಪ್ರೌಢಿಮೆ ಮೆರೆದಿದ್ದರು.