ಮೇ 5 ರಂದು ಭಾನುವಾರ ನಡೆದ ನೀಟ್ ಪರೀಕ್ಷೆಯಿಂದ ನೂರಾರು ವಿದ್ಯಾರ್ಥಿಗಳು ವಂಚಿತರಾಗಿದ್ದರು. ಬೆಂಗಳೂರು, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಕೇಂದ್ರಗಳಲ್ಲಿ ಭಾನುವಾರ ಏಕಕಾಲದಲ್ಲಿ ಪರೀಕ್ಷೆ ನಡೆದಿದ್ದು, ಉತ್ತರ ಕರ್ನಾಟಕ ಭಾಗದಿಂದ ಪರೀಕ್ಷೆ ಬರೆಯಲು ಬೆಂಗಳೂರನ್ನು ಪರೀಕ್ಷಾ ಕೇಂದ್ರವನ್ನಾಗಿ ಆಯ್ಕೆ ಮಾಡಿಕೊಂಡಿದ್ದ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದ ಹಂಪಿ ಎಕ್ಸ್ಪ್ರೆಸ್ ರೈಲು ಸಕಾಲದಲ್ಲಿ ಬೆಂಗಳೂರನ್ನು ತಲುಪದ ಪರಿಣಾಮ 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದಲೇ ವಂಚಿತರಾಗುವಂತಾಗಿತ್ತು.