ನಲಪಾಡ್ ಪರ ವಕೀಲರು ನ್ಯಾಯಲಯಕ್ಕೆ ಹಾಜರಾಗಿ "ತಮ್ಮ ಕಕ್ಷಿದಾರರು ಇಪ್ಪತ್ತು ದಿನಗಳ ಕಾಲ ಮಕ್ಕಾಗೆ ತೆರಳುವವರಿದ್ದಾರೆ. ಹಾಗಾಗಿ ಅವರ ಜಾಮೀನು ಷರತ್ತುಗಳನ್ನು ಸಡಿಲಿಸಬೇಕು" ಎಂದು ಮನವಿ ಮಾಡಿದ್ದರು.ಆಗ ನಲಪಾಡ್ ವಿರುದ್ಧ ಯಾವ ಆರೋಪವಿದೆ ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಆಗ ವಕೀಲರು ಸೆಕ್ಷನ್ 307(ಕೊಲೆ ಯತ್ನ) ಆರೋಪವಿದೆ ಎಂದಿದ್ದಾರೆ. ಇದಕ್ಕೆ ಪ್ರತಿಕ್ರಯಿಸಿದ ನ್ಯಾಯಾಲಯ "ನೀವು ಮಾಡಿದ ಪಾಪ ಎಲ್ಲಿಗೇ ಹೋದರೂ ತೂಳೆದು ಹೋಗಲ್ಲ ಬಿಡಿ" ಎಂದು ಚಾಟಿ ಬೀಸಿದ್ದಾರೆ.