ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರದ ಪರವಾಗಿ ಸರ್ವೋಚ್ಛ ನ್ಯಾಯಾಲಯ ಆದೇಶ ಹೊರಡಿಸಿರುವುದು ಸಂತಸ ತಂದಿದೆ. ಹೊಸ ಹುದ್ದೆ ಸೃಷ್ಟಿ, ಇತರರಿಗೆ ಯಾವ ರೀತಿಯಲ್ಲಿಯೂ ತೊಂದರೆಯಾಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು. ಸುಪ್ರೀಂಕೋರ್ಟ್ ತೀರ್ಪಿನ ಪ್ರತಿಯಲ್ಲಿರುವ ಸಾಧಕ ಬಾಧಕಗಳ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಜೊತೆಗೆ ಚರ್ಚಿಸಿ, ಬಳಿಕ ಇಲಾಖಾವಾರು ಜೇಷ್ಠತಾ ಪಟ್ಟಿಗಳನ್ನು ಸಿದ್ಧಪಡಿಸಲಾಗುವುದು ಎಂದು ಹೇಳಿದ್ದಾರೆ.