ನೀರಿನ ಕೊರತೆ: ಮಂಗಳೂರು ರಸಗೊಬ್ಬರ ಕಾರ್ಖಾನೆ ಕಾರ್ಯಾಚರಣೆ ಸ್ಥಗಿತ

ನಗರದ ಪಣಂಬೂರಿನಲ್ಲಿರುವ ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ-ಎಂಸಿಎಫ್ ನೀರಿನ ಕೊರತೆಯಿಂದಾಗಿ ತನ್ನ ಕಾರ್ಯಚರಣೆಯನ್ನು ಮಂಗಳವಾರದಿಂದ...
ಎಂಸಿಎಫ್
ಎಂಸಿಎಫ್
Updated on
ಮಂಗಳೂರು: ನಗರದ ಪಣಂಬೂರಿನಲ್ಲಿರುವ ರಾಜ್ಯದ ಏಕೈಕ ರಸಗೊಬ್ಬರ ಕಾರ್ಖಾನೆ-ಎಂಸಿಎಫ್ ನೀರಿನ ಕೊರತೆಯಿಂದಾಗಿ ತನ್ನ ಕಾರ್ಯಚರಣೆಯನ್ನು ಮಂಗಳವಾರದಿಂದ ಸ್ಥಗಿತಗೊಳಿಸಿದೆ.
ವಾರ್ಷಿಕ ನಿರ್ವಹಣೆಗಾಗಿ ಮಾರ್ಚ್‌ನಿಂದ ಸುಮಾರು 40 ದಿನಗಳ ಕಾಲ ಮುಚ್ಚಲ್ಪಟ್ಟಿದ್ದ ಮಂಗಳೂರು ಕೆಮಿಕಲ್ ಫರ್ಟಿಲೈಸರ್(ಎಂಸಿಎಫ್) ಕಂಪನಿ ಒಂದೇ ತಿಂಗಳಲ್ಲಿ ಮತ್ತೆ ನೀರಿಲ್ಲದ ಕಾರಣದಿಂದ ಇಂದು ಬೆಳಗ್ಗಿನಿಂದ ಸ್ಥಗಿತಗೊಂಡಿದೆ.
ನೀರಿನ ಪೂರೈಕೆ ಸರಿಯಾಗಿ ಆಗುವವರೆಗೂ ಕಾರ್ಖಾನೆ ಪುನರಾರಂಭವಾಗುವುದಿಲ್ಲ. ಎಂಸಿಎಫ್‌ನ ಪ್ರಮುಖ ಉತ್ಪನ್ನ ವಾದ ಯೂರಿಯಾ. ರಸಗೊಬ್ಬರವನ್ನು ಕೇಂದ್ರ ರಸಗೊಬ್ಬರ ಸಚಿವಾಲಯ ಎಂಸಿಎಫ್‌ನಿಂದ ಖರೀದಿಸಿ, ವಿವಿಧ ರಾಜ್ಯಗಳಿಗೆ ವಿತರಣೆ ಮಾಡುತ್ತದೆ. ಅದರಂತೆ ರಾಜ್ಯದ ಬಹುತೇಕ ಕೃಷಿಕರಿಗೆ ಎಂಸಿಎಫ್‌ನಿಂದಲೇ ಯೂರಿಯಾ ಪೂರೈಕೆಯಾಗುತ್ತದೆ. ಎಂಸಿಎಫ್ ಸರಾಸರಿ ದಿನಕ್ಕೆ 1600 ಟನ್ ಯೂರಿಯಾ, 800 ಟನ್‌ನಷ್ಟು ಡಿಎಪಿ ಗೊಬ್ಬರ ಮತ್ತು 700 ಟನ್‌ನಷ್ಟು ಅಮೋನಿಯಾ ಉತ್ಪಾದಿಸುತ್ತದೆ. 
ಪ್ರತಿದಿನ ಎಂಸಿಎಫ್ ಕಾರ್ಖಾನೆ ಕೆಲಸ ಮಾಡಲು 1.6 ಮಿಲಿಯನ್ ಗ್ಯಾಲನ್ ನೀರು ಬೇಕಾಗುತ್ತದೆ. ಅದರಲ್ಲಿ 1.5 ಎಂಜಿಡಿ ನೇತ್ರಾವತಿಯಿಂದ ಕಂಪನಿಗೆ ಪೂರೈಕೆ ಮಾಡಲಾಗುತ್ತದೆ. ಶೌಚಾಲಯ ಸೇರಿದಂತೆ ಇತರ ತ್ಯಾಜ್ಯ ನೀರನ್ನು ಎಂಬಿಆರ್(ಮೆಂಬ್ರೇನ್ ಬಯೊರಿಯಾಕ್ಟರ್) ಯುನಿಟ್ ಮೂಲಕ ಸಂಸ್ಕರಿಸಿ ಬಳಕೆ ಮಾಡಲಾಗುತ್ತದೆ. ಕಳೆದ ಕೆಲ ದಿನಗಳಿಂದ ಮಂಗಳೂರು ಪಾಲಿಕೆಯಿಂದ ಪೂರೈಕೆಯಾಗುವ ನೀರಿನ ಪ್ರಮಾಣ ಕಡಿಮೆಯಾಗುತ್ತಾ ಬಂದಿದೆ. 1.5 ಎಂಜಿಡಿ ಬದಲು, 1 ಎಂಜಿಡಿಗಿಂತಲೂ ಕಡಿಮೆ ನೀರು ಬರುತ್ತಿದೆ. ನೀರಿನ ರೇಷನಿಂಗ್ ಶುರುವಾದ ಕಾರಣ ನಮ್ಮಲ್ಲಿದ್ದ ನೀರಿನ ಸಂಗ್ರಹವೂ ಖಾಲಿಯಾಗುತ್ತಾ ಬಂದಿದೆ. ಹಾಗಾಗಿ ಕಾರ್ಖಾನೆ ಮುಚ್ಚದೇ ಬೇರೆ ದಾರಿಯಿಲ್ಲ ಎಂದು ಎಂಸಿಎಫ್ ನಿರ್ದೇಶಕ ಪ್ರಭಾಕರ ರಾವ್ ಹೇಳಿದ್ದಾರೆ.
ನೀರಿನ ಪೂರೈಕೆ ಸಮರ್ಪವಾಗುವ ತನಕ ಇದೇ ಪರಿಸ್ಥಿತಿ ಮುಂದುವರಿಯಲಿದೆ. ಇನ್ನೂ ಮಳೆಗಾಲ ಆರಂಭಗೊಂಡ ಬಳಿಕವಷ್ಟೇ ನೀರಿನ ಪೂರೈಕೆ ಸಾಧ್ಯವಾಗಲಿದೆ. ಮಂಗಳೂರಿಗೆ ನೀರು ಪೂರೈಸುವ ತುಂಬೆ ಅಣೆಕಟ್ಟಿನಲ್ಲಿ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂದು ನೀರಿನ ಮಟ್ಟ 3.85 ಮೀಟರ್ ಇದೆ. ಕಳೆದ ವರ್ಷ ಇದೇ ದಿನದಂದು ತುಂಬೆ ಜಲಾಶಯದಲ್ಲಿ 5.93 ಮೀಟರ್ ನೀರು ಇತ್ತು. ಈ ಬಾರೀ ದೊಡ್ಡ ಪ್ರಮಾಣದಲ್ಲಿ ನೀರಿನ ಕೊರತೆ ಎದುರಾಗಿದೆ. 
ಈ ಹಿನ್ನೆಲೆಯಲ್ಲಿ ನಗರಕ್ಕೆ ಕುಡಿಯುವ ನೀರನ್ನು ವಾರದಲ್ಲಿ ನಾಲ್ಕು ದಿನವಷ್ಟೇ ಪೂರೈಕೆ ಮಾಡಲಾಗುತ್ತಿದೆ. ಎಂ.ಸಿ.ಎಫ್. ಕಾರ್ಯಚರಣೆ ಸ್ಥಗಿತಗೊಳಿಸಿರುವದರಿಂದ ಈ ಬಾರಿ ರಸಗೊಬ್ಬರ ಪೂರೈಕೆಯಲ್ಲಿ ಕೊರತೆ ಎದುರಾಗಲಿದೆ ಎಂದು ಅಂದಾಜಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com