ಮಂಗಳೂರು ಮಹಿಳೆ ಬರ್ಬರ ಹತ್ಯೆ ಪ್ರಕರಣ: ಹಂತಕ ದಂಪತಿಗಳ ಬಂಧನ

ಮಂಗಳೂರು ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳುರು ಪೋಲೀಸರು ಆರೋಪಿ ದಂಪತಿಗಳನ್ನು ಬಂಧಿಸಿದ್ದಾರೆ.
ಮಂಗಳೂರು ಮಹಿಳೆ ಬರ್ಬರ ಹತ್ಯೆ ಪ್ರಕರಣ: ಹಂತಕ ದಂಪತಿಗಳ ಬಂಧನ
ಮಂಗಳೂರು ಮಹಿಳೆ ಬರ್ಬರ ಹತ್ಯೆ ಪ್ರಕರಣ: ಹಂತಕ ದಂಪತಿಗಳ ಬಂಧನ
Updated on
ಮಂಗಳುರು: ಮಂಗಳೂರು ಅಮರ್ ಆಳ್ವಾ ರಸ್ತೆ ನಿವಾಸಿ ಶ್ರೀಮತಿ ಶೆಟ್ಟಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳುರು ಪೋಲೀಸರು ಹಂತಕ ದಂಪತಿಗಳನ್ನು ಬಂಧಿಸಿದ್ದಾರೆ.
ಕರಾವಳಿ ನಗರವನ್ನೇ ಬೆಚ್ಚಿ ಬೀಳಿಸಿದ್ದ ಶ್ರೀಮತಿ ಶೆಟ್ತಿ (35) ಹತ್ಯೆ ಕೇಸ್ ಬೆನ್ನು ಹಿಡಿದಿದ್ದ ಮೂವತ್ತು ಮಂದಿ ಪೋಲೀಸ್ ತಂಡ ಆರೋಪಿಗಳಾದ  ಜಾನ್ಸನ್ ಮತ್ತು ಪತ್ನಿ ವಿಕ್ಟೋರಿಯಾ ಮಥಾಯಿಸ್ ಎಂಬುವರನ್ನು ಬಂಧಿಸಿದೆ.
ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕಮಿಷನರ್ ಸಂದೀಪ್ ಪಾಟೀಲ್ "ಹಣಕಾಸು ವ್ಯವಹಾರದ ವೈಷಮ್ಯವು ಕೊಲೆಗೆ ಕಾರಣವಾಗಿದೆ. ಪೋಲೀಸರು ಆರೋಪಿಯನ್ನು ಬಂಧಿಸ ಹೋದಾಗ ಆತ ಆತ್ಮಹತ್ಯೆಗೆ ಯತ್ನಿಸಿದ್ದ. ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿದ್ದೇವೆ, ಆತನ ಪತ್ನಿ ಈ ಕೊಲೆಗೆ ಸಹಕಾರ ನಿಡಿದ್ದಾಳೆ, ಹಾಗಾಗಿ ಆಕೆಯನ್ನೂ ವಶಕ್ಕೆ ಪಡೆಯಲಾಗಿದೆ. ಜತೆಗೆ ಅವರು ಬಳಸಿದ್ದ ದ್ವಿಚಕ್ರ ವಾಹನ ಸಹ ಜಪ್ತಿ ಮಾಡಿದ್ದೇವೆ" ಎಂದಿದ್ದಾರೆ.
"ಶ್ರೀಮತಿ ಶೆಟ್ಟಿ ಬಳಿ ಆರೋಪಿ ಜಾನ್ಸನ್ ಸಾಲ ಪಡೆಇದ್ದಾನೆ. ಆಕೆ ಸಾಲದ ಹಣ ಹಿಂತಿರುಗಿಸಲು ಕೇಳಿದಾಗ ಅದಕ್ಕೆ ದಂಪತಿಗಳು ನಿರಾಕರಿಸಿದ್ದರು. ಶನಿವಾರ ಬೆಳಿಗ್ಗೆ ಸಾಲದ ಹಣ ನೀಡುವಂತೆ ಕೇಳಿಕೊಂಡು ಶ್ರೀಮತಿ ಶೆಟ್ತಿ ಜಾನ್ಸನ್ ಮನೆಗೆ ಬಂದಾಗ ದಂಪತಿಗಳು ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿ ರುಂಡ, ಮುಂಡವನ್ನು ಬೇರ್ಪಡಿಸಿ ಮಂಗಳೂರು ನಗರದ ಬೇರೆ ಬೇರೆ ಭಾಗಗಳಲ್ಲಿ ಎಸೆದಿದ್ದಾರೆ ಎಂದು ಪೋಲೀಸರು ವಿವರಿಸಿದರು.
ಶ್ರೀಮತಿ ಶೆಟ್ತಿ ದೇಹದ ಭಾಗಗಳು ನಗರದ ಕದ್ರಿ ಪಾರ್ಕ್ ಹಾಗೂ ನಂದಿಗುಡ್ಡೆಯಲ್ಲಿ ಪತ್ತೆಯಾಗಿದ್ದವು. ಆಕೆಯ ದ್ವಿಚಕ್ರ ವಾಹನ ಸೋಮವಾರ ನಾಗುರಿ ಸಮೀಪದ ರಸ್ತೆ ಬದಿಯಲ್ಲಿ ಪತ್ತೆಯಾಗಿತ್ತು. ಈ ಪ್ರಕರಣ ಮಂಗಳೂರು ಜನತೆಯಲ್ಲಿ ವ್ಯಾಪಕ ಭೀತಿಯನ್ನು ಹುಟ್ಟು ಹಾಕಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com