ಜೆಡಿಎಸ್ ಜಿಲ್ಲಾಧ್ಯಕ್ಷೆ ಆಗಿದ್ದ ರೇಷ್ಮಾ ಪಡೇಕನೂರ, 2013ರಲ್ಲಿ ದೇವರ ಹಿಪ್ಪರಗಿ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋಲು ಕಂಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ರೇಷ್ಮಾ ಅವರಿಗೆ ಪಕ್ಷ ಟಿಕೆಟ್ ಕೊಟ್ಟಿರಲಿಲ್ಲ. ಇದರಿಂದ ಬೇಸರಗೊಂಡಿದ್ದ ಆಕೆ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದರು.