ದೇವಾ! ರಾಜ್ಯದಲ್ಲಿ ಮಳೆಗಾಗಿ ಪ್ರಾರ್ಥಿಸಿ 34 ಸಾವಿರಕ್ಕೂ ಅಧಿಕ ದೇವಾಲಯಗಳಲ್ಲಿ 'ಹೋಮ'
ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ ಈ ಬಾರಿಯೂ ಸಾಮಾನ್ಯ ಮುಂಗಾರು ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.
ಬೆಂಗಳೂರು: ಸತತವಾಗಿ ಬರಗಾಲಕ್ಕೆ ತುತ್ತಾಗುತ್ತಿರುವ ರಾಜ್ಯದಲ್ಲಿ ಈ ಬಾರಿಯೂ ಸಾಮಾನ್ಯ ಮುಂಗಾರು ಕ್ಷೀಣಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವುದರಿಂದ ಸರ್ಕಾರ ದೇವರ ಮೊರೆ ಹೋಗಲು ನಿರ್ಧರಿಸಿದೆ.
ಮುಜರಾಯಿ ಇಲಾಖೆಯ ವ್ಯಾಪ್ತಿಗೊಳಪಡುವ 34 ಸಾವಿರದ 559 ದೇವಾಲಯಗಳಲ್ಲಿ ಪರ್ಜನ್ಯ ಹೋಮ ನಡೆಸಲು ಚಿಂತನೆ ನಡೆಸಲಾಗಿದೆ. 2017ರಲ್ಲಿ ಕಾವೇರಿ ಉಗಮ ತಾಣ ತಲಾ ಕಾವೇರಿಯಲ್ಲಿ ಮಾತ್ರ ಈ ಹೋಮ ನಡೆಸಲಾಗಿತ್ತು.