ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ
ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಬೆಳಗಾವಿ: ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ, ಸಾವಿನ ಸುತ್ತ ಅನುಮಾನಗಳ ಹುತ್ತ

ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಬೆಳಗಾವಿ: ಶೌಚಾಲಯವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆಯಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದಲ್ಲಿ ನಡೆದಿದೆ.
ಭಾನುವಾರ ಬೆಳಕು ಕಂಡ ಘಟನೆಯಲ್ಲಿ ಗೋಕಾಕ್​ ತಾಲೂಕಿನ ಅಡಿವೆಪ್ಪನ ಅಂಕಲಗಿ ಗ್ರಾಮದ ಶಿವಕುಮಾರ್​ ಬಲರಾಮ್​ ಉಪ್ಪಾರ (19)  ಎಂಬಾತ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.
ಹಿರೇಬಾಗೇವಾಡಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಯುವಕನ ಶವ ದೊರಕಿದ್ದು ಇದೊಂದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ.
ಹಿಂದೂಪರ ಸಂಘಟನೆಗಳ ಕೆಲಸಗಳಲ್ಲಿ ಗುರುತಿಸಿಕೊಂಡಿದ್ದ ಶಿವಕುಮಾರ್ ಅನೇಕ ಬಾರಿ ಗೋವುಗಳ ಕಳ್ಳಸಾಗಣೆಯನ್ನು ತಡೆದಿದ್ದ. ಹೀಗಾಗಿ ಗೋ ಸಾಗಣೆದಾರರೇ ಈತನನ್ನು ಕೊಂದು ಶಂಕೆ ವ್ಯಕ್ತವಾಗಬಾರದೆಂದು ಇಲ್ಲಿ ನೇಣಿಗೇರಿಸಿದ್ದಾರೆ ಎಂದು ಆತನ ಕುಟುಂಬಿಕರು, ಹಿಂದೂ ಸಂಘಟನೆ ಕಾರ್ಯಕರ್ತರು ಆರೋಪಿಸಿದ್ದಾರೆ.
ಘಟನೆ ಸಂಬಂಧ ಹಿರೇಬಾಗೇವಾಡಿ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ.

Related Stories

No stories found.

Advertisement

X
Kannada Prabha
www.kannadaprabha.com