ಈ ಸಂಬಂಧ ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೇಂದ್ರ ಸರ್ಕಾರ ಕಡತಕ್ಕೆ ಅನುಮೋದನೆ ನೀಡಲು ಕನಿಷ್ಟ 45 ದಿನಗಳ ಕಾಲಾವಕಾಶ ಅಗತ್ಯವಿದೆ, ಹೀಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಟೆಂಡರ್ ಕರೆಯಲಾಗಿದೆ. 2017ರಲ್ಲಿ ಮೋಡ ಬಿತ್ತನೆಯಿಂದಾಗಿ ರಾಜ್ಯದಲ್ಲಿ ಶೇ 27 ರಷ್ಟು ಮಳೆ ಪ್ರಮಾಣ ಹೆಚ್ಚಳವಾಗಿದೆ ಎಂದು ತಜ್ಞರು ವರದಿ ನೀಡಿದ್ದಾರೆ ಎಂದು ಮೋಡ ಬಿತ್ತನೆಯನ್ನು ಸಮರ್ಥಿಸಿಕೊಂಡರು.