ಉದ್ಯೋಗ ಅರಸಿ ದೂರದ ಜಾರ್ಖಂಡ್ ನಿಂದ ಕರ್ನಾಟಕಕ್ಕೆ ಬಂಇದ್ದ ಈ ಕಾರ್ಮಿಕರು ಕೆಲವು ತಿಂಗಳುಗಳ ಹಿಂದೆ, ಖಾನಪುರ-ಬೆಳಗಾವಿ ರಸ್ತೆ ಅಗಲೀಕರಣ ಯೋಜನೆಯಲ್ಲಿ ಕೆಲಸಕ್ಕೆ ಸೇರಿದ್ದಾರೆ.ರಸ್ತೆ ಅಗಲೀಕರಣಕ್ಕಾಗಿ ಭೂಮಿಯನ್ನು ಅಗೆಯುವ ಕೆಲಸಕ್ಕೆ ನಿಯೋಜಿತರಾಗಿದ್ದ ಇವರು ಮಣ್ಣನ್ನು ಅಗೆಯುತ್ತಿದ್ದಾಗಲೇ ಪಕ್ಕದಲ್ಲೇ ಹಾಕಿದ್ದ ಮಣ್ಣಿನ ಗುಡ್ಡ ಕುಸಿದು ಬಿದ್ದಿದೆ. ಆಗ ತಕ್ಷಣ ಮೇಲಕ್ಕೆ ಬರಲಾಗದ ಕಾರಣ ಮಣ್ಣಿನಲ್ಲೇ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆಂದು ಮೂಲಗಳು ಹೇಳಿದೆ.