ಸಂಪಾದಕರ ಮೇಲೆ ದೂರು: ಕೆಯುಡಬ್ಲ್ಯುಜೆ ಖಂಡನೆ

ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ...
ನಿಖಿಲ್ ಕುಮಾರಸ್ವಾಮಿ-ವಿಶ್ವೇಶ್ವರ ಭಟ್
ನಿಖಿಲ್ ಕುಮಾರಸ್ವಾಮಿ-ವಿಶ್ವೇಶ್ವರ ಭಟ್
Updated on
ಬೆಂಗಳೂರು: ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿಗೆ ಸಂಬಂಧಪಟ್ಟಂತೆ ಸುಳ್ಳು ವರದಿ ಪ್ರಕಟಿಸಲಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ವಿಶ್ವವಾಣಿ ಪತ್ರಿಕೆ ಸಂಪಾದಕ ವಿಶ್ವೇಶ್ವರ ಭಟ್ ಅವರ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿರುವುದು ಸೂಕ್ತ ಕ್ರಮವಲ್ಲ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಆರೋಪಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿರುವ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪತ್ರಿಕೆಯಲ್ಲಿ ಬಂದಿರುವ ಸುದ್ದಿ ಉದ್ದೇಶಪೂರಿತವಾಗಿದ್ದರೆ, ಸುಳ್ಳು ಮಾಹಿತಿಯಾಗಿದ್ದರೆ ಸ್ಪಷ್ಟನೆ, ವಿವರಣೆ ಕೊಡುವುದು ಕ್ರಮಬದ್ಧವಾದದ್ದು. ಅದನ್ನು ಬಿಟ್ಟು ಸುದ್ದಿ ನೆಪ ಮಾಡಿ ದೂರು ದಾಖಲಿಸಿರುವುದು ದ್ವೇಷದ ನಡವಳಿಕೆಗೆ ಇಂಬು ನೀಡಿದಂತಾಗಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com