ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಹುಲಿ ಉಗುರು ಮತ್ತು ನರಿ ಹಲ್ಲುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ರಾಜ್ಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರನ್ನು ಹಾಸನ ಜಿಲ್ಲೆಯ ಧವನ್(45) ಮತ್ತು ಗೋಕುಲ್ ಎಂದು ಗುರುತಿಸಲಾಗಿದೆ ಎಂದು ಅರಣ್ಯ ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಬಂಧಿತ ಇಬ್ಬರು ಆರೋಪಿಗಳು ಹಕ್ಕಿಪಿಕ್ಕಿ ಜನಾಂಗದವರಾಗಿದ್ದು, ಅವರಿಂದ 6 ಹುಲಿ ಉಗುರು ಮತ್ತು 5 ನರಿ ಹಲ್ಲುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಆರೋಪಿಗಳನ್ನು ಪ್ರಧಾನ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶರ ಮುಂದೆ ಹಾಜರಿಪಡಿಸಲಾಗಿದ್ದು, ನ್ಯಾಯಾಧೀಶರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
Advertisement