ಸಿನಿಮೀಯ ಶೈಲಿಯಲ್ಲಿ ವ್ಯಕ್ತಿ ಕೊಲೆ: ಹಳೆ ವೈಷಮ್ಯ ಶಂಕೆ

ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಬಳಿಕ‌ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಕಲಬುರಗಿ: ಚಲಿಸುತ್ತಿದ್ದ ಕಾರಿಗೆ ಮತ್ತೊಂದು ಕಾರಿನಿಂದ ಡಿಕ್ಕಿ ಹೊಡೆದು ಬಳಿಕ‌ ವ್ಯಕ್ತಿಯನ್ನು ಸಿನಿಮೀಯ ಶೈಲಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಕಲಬುರಗಿ ಹೊರವಲಯದ ಸಿರಸಗಿ ಗ್ರಾಮದ ಬಳಿ ಸೋಮವಾರ ತಡರಾತ್ರಿ ನಡೆದಿದೆ.

ಶಿವಲಿಂಗ್ ಕೊಲೆಯಾದ ವ್ಯಕ್ತಿ. ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ‌ ಮಾಡಲಾಗಿದ್ದು, ಕೊಲೆಯ ಹಿಂದೆ ಕಾಂಗ್ರೆಸ್ ಜಿಲ್ಲಾ ಪಂಚಾಯ್ತಿ ಸದಸ್ಯ ಶಾಂತಪ್ಪ ಕೂಡಲಗಿ ಸೇರಿದಂತೆ ಹಲವರ ಕೈವಾಡವಿದೆ ಎಂದು ಮೃತ ಶಿವಲಿಂಗ್ ಸಂಬಂಧಿಕರು ಆರೋಪಿಸಿದ್ದಾರೆ.

ಇತ್ತೀಚೆಗೆ ಗ್ರಾಮದಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಕೊಲೆಯಾದ ಶಿವಲಿಂಗ್ ಜೈಲಿಗೆ ಹೋಗಿ ಸೋಮವಾರ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಈ ವಿಷಯ ತಿಳಿದು ಶಾಂತಪ್ಪ ಸಂಬಂಧಿಕರು ಮಾರಕಾಸ್ತ್ರಗಳಿಂದ ಶಿವಲಿಂಗ್ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬರುತ್ತಿದೆ.ಈ ಸಂಬಂಧ ಪ್ರಕರಣ ದಾಖಲಾಗಿದ್ದು ಆರೋಪಿಗಳಾಗಾಗಿ ಪೊಲೀಸರು ಶೋಧ ಮುಂದುವರಿಸುತ್ತಿದ್ದಾರೆ, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com