ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತ ವರದಿ ಸಲ್ಲಿಸುವಂತೆ ಸಚಿವ ಸಿ ಟಿ ರವಿ ಸೂಚನೆ

: ರಾಯಚೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಡಿಸೆಂಬರ್ ವೇಳೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಸಿಟಿ ರವಿ
ಸಿಟಿ ರವಿ
Updated on

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದು ಸುಸ್ಥಿರ ಪ್ರವಾಸೋದ್ಯಮ ಅಭಿವೃದ್ಧಿ ಕುರಿತಂತೆ ಡಿಸೆಂಬರ್ ವೇಳೆಗೆ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ ಟಿ ರವಿ ಹೇಳಿದ್ದಾರೆ.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ರಾಜ್ಯ ಗುರುತಿಸಿದ 3 ಹಾಗೂ ಜಿಲ್ಲೆ ಗುರುತಿಸಿದ 7 ಪ್ರವಾಸಿ ತಾಣಗಳಿದ್ದು ಇನ್ನೂ ಕೈಬಿಟ್ಟು ಹೋಗಿರುವ ತಾಣಗಳ ಬಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು, ತಜ್ಞರು ಮತ್ತು ಪತ್ರಕರ್ತರೊಂದಿಗೆ ಮಾಹಿತಿ ಪಡೆದು ಡಿಸೆಂಬರ್ ಅಂತ್ಯದೊಳಗೆ ಸಮಗ್ರ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com