ಬೆಂಗಳೂರು: ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟರೆ, ಸವಾರ ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಕೆಂಗೇರಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ.
ಕೆಂಗೇರಿಯ ಬೀಡಿ ಕಾಲೋನಿಯ ಮುಹಮ್ಮದ್ ಸನಾಉಲ್ಲಾ (18) ಮೃತಪಟ್ಟವರು. ಘಟನೆಯಲ್ಲಿ ಸಾಧಿಕ್ ಪಾಷ (26) ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಗಂಭೀರವಾಗಿದೆ.
ಸಾದಿಕ್ ಪಾಷ ಅವರು ಸ್ನೇಹಿತನಾಗಿದ್ದ ಗುಜರಿ ವ್ಯಾಪಾರಿ ಮಹ್ಮದ್ ಸನಾಉಲ್ಲಾ ಅವರನ್ನು ಹೊಂಡಾ ಆಕ್ಟಿವಾ ಸ್ಕೂಟರ್ನಲ್ಲಿ ಕೂರಿಸಿಕೊಂಡು ರಾತ್ರಿ 10 ಗಂಟೆ ಸುಮಾರಿಗೆ ಕೆಂಗೇರಿ ಕಡೆಯಿಂದ ಆರ್.ವಿ. ಕಾಲೇಜಿನ ಕಡೆಗಿನ ರಸ್ತೆಯಲ್ಲಿ ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಘಟನೆ ಸಂಬಂಧ ಕೆಂಗೇರಿ ಸಂಚಾರಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Advertisement