ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ಕೋಟಕ್ ಮಹೀಂದ್ರ ಬ್ಯಾಂಕ್‌ ಡೆಪ್ಯುಟಿ ಮ್ಯಾನೇಜರ್ ಆತ್ಮಹತ್ಯೆ

ಜಾರ್ಖಂಡ್ ಮುಖ್ಯಮಂತ್ರಿ ರಘುಬರ್​ ದಾಸ್​ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
Published on

ಬೆಂಗಳೂರು: ಜಾರ್ಖಂಡ್ ಮುಖ್ಯಮಂತ್ರಿ ರಘುಬರ್​ ದಾಸ್​ ಅವರ ಮಾಜಿ ಸಲಹೆಗಾರನ ಪುತ್ರ ಕೋಟಕ್ ಮಹೀಂದ್ರ ಬ್ಯಾಂಕ್‌ನ ಉಪ ಪ್ರಬಂಧಕ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಕೋಟಕ್ ಮಹೀಂದ್ರ ಬ್ಯಾಂಕ್​​ನ ಡೆಪ್ಯುಟಿ ಮ್ಯಾನೇಜರ್ ಆಗಿದ್ದ 27 ವರ್ಷದ ರೋಹಿತ್, ನಗರದ ದೊಮ್ಮಲೂರು ಬಳಿಯ ಸಾಯಿಕೃಷ್ಣ ಅಪಾರ್ಟ್​​​ಮೆಂಟ್​​ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶನಿವಾರ ಬೆಳಗ್ಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಅಪಾರ್ಟ್​​ಮೆಂಟ್​ನ ಫ್ಯ್ಲಾಟ್‌ನಿಂದ ಕೆಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಅಪಾರ್ಟ್​​ಮೆಂಟ್​ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ರವಾನಿಸಿದರು.ಮೃತನ ಸಾವಿಗೆ ಕಾರಣವಿನ್ನೂ ತಿಳಿದುಬಂದಿಲ್ಲ.

ಮೃತಪಟ್ಟ ಎರಡು ದಿನಗಳ ನಂತರ ಶವ ಪತ್ತೆಯಾಗಿದೆ ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. ರೋಹಿತ್ ಸ್ನಾತಕೋತ್ತರ ಪದವಿಧರರಾಗಿದ್ದು ಕಳೆದ ಒಂದೆರಡು ವರ್ಷಗಳಿಂದ  ದೊಮ್ಮಲೂರಿನ  ಅಪಾರ್ಟ್‌ಮೆಂಟ್‌ನಲ್ಲಿ ತಂಗಿದ್ದರು ಎಂದು ಇಂದಿರಾನಗರ ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com