ಚಿಕ್ಕಮಗಳೂರು: ಜ್ಯೂಸ್ ಎಂದು ಕಳೆನಾಶಕ ಕುಡಿದು ಬಾಲಕ ಸಾವು

ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಿಕ್ಕಮಗಳೂರು: ಜ್ಯೂಸ್ ಎಂದು ಭಾವಿಸಿ ಕಳೆನಾಶಕ ಕುಡಿದು ಮೂರು ವರ್ಷದ ಬಾಲಕ  ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯಲ್ಲಿ ನಡೆದಿದೆ. 

ಅಕ್ಟೋಬರ್ 24ರಂದು ಕಳೆನಾಶಕ ಸೇವಿಸಿದ್ದ ಮಗು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದೆ. ಅಕ್ಟೋಬರ್ 24ರಂದು ಜ್ಯೂಸ್‌ ಎಂದು ಭಾವಿಸಿ 3 ವರ್ಷದ ಮಗು ಅಗಸ್ತ್ಯ ಕಳೆನಾಶಕವನ್ನು ಸೇವಿಸಿತ್ತು. ಬಳಿಕ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ದುರ್ಗದಹಳ್ಳಿಯ ಪ್ರವೀಣ್-ಪೂಜಿತ ದಂಪತಿಯ ಏಕೈಕ ಪುತ್ರನಾಗಿದ್ದ ಅಗಸ್ತ್ಯನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. 

ಆದರೆ 18 ದಿನಗಳಿಂದ ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಮಗು ಮೃತಪಟ್ಟಿದೆ. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಗಸ್ತ್ಯ ಸಾವಿಗೀಡಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ಬಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com