ಬೆಂಗಳೂರು: ಬರ್ತ್ ಡೇ ಪಾರ್ಟಿ ನಂತರ ಇಬ್ಬರ ಸಾವು; ಗಾಂಜಾ ಸೇವನೆ ಶಂಕೆ

ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.
ಮೃತ ಯುವಕರು
ಮೃತ ಯುವಕರು
Updated on

ಬೆಂಗಳೂರು: ಹುಟ್ಟುಹಬ್ಬದ ಪಾರ್ಟಿಯಲ್ಲಿ ಗಾಂಜಾ ಸೇವನೆ ಮಾಡಿದ್ದರಿಂದ ಯುವಕರಿಬ್ಬರೂ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ.

ಅಭಿಲಾಷ್​, ಗೋಪಿ ಎಂಬ ಯುಕವರು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದು, ಸುಮನ್ ಅಲಿಯಾಸ್ ಚಿಟ್ಟೆ ಎಂಬಾತನ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. 

ಮಲ್ಲೇಶ್ವರಂ ಕೋದಂಡರಾಮಪುರದಲ್ಲಿ ಈ ಘಟನೆ ನಡೆದಿದೆ. ಪಾರ್ಟಿ ಮುಗಿಸಿ ಬಂದ ಅಭಿಲಾಷ್, ಗೋಪಿ ದುರ್ಮರಣ ಹೊಂದಿದ್ದು, ಮತ್ತೊಬ್ಬ ಯುವಕ ಕೂಡ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದ ಚಿಟ್ಟೆ ಅಲಿಯಾಸ್ ಸುಮನ್ ಸೇರಿದಂತೆ 6 ಮಂದಿ ಯುವಕರ ಸ್ಥಿತಿ ಗಂಭೀರವಾಗಿದೆ.

ಈ ಯುವಕರು ಮಂಗಳವಾರ ಗೆಳೆಯನ ಹುಟ್ಟುಹಬ್ಬದ ಪಾರ್ಟಿ ಮಾಡಿದ್ದರು. ಹುಟ್ಟುಹಬ್ಬದ ಸೆಲೆಬ್ರೇಷನ್ ಅಂತ ಯುವಕರು ಗಾಂಜಾ ಸೇವನೆ ಮಾಡಿದ್ದಾರೆ ಎಂದು ಶಂಕಿಸಲಾಗಿದೆ. ತಡರಾತ್ರಿವರೆಗೂ ಪಾರ್ಟಿ ಮಾಡಿ ಮನೆಗೆ ತೆರೆಳಿದ್ದ ಯುವಕರು ಅಸ್ವಸ್ಥಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದುರಾದೃಷ್ಟವಶಾತ್ ಈ ಯುವಕರಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಈ ಸಂಬಂಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ವರದಿಯಲ್ಲಿ ಸಾವಿನ ರಹಸ್ಯ ಹೊರಬೀಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com