ರಸ್ತೆ ಅಪಘಾತ: ವರದಿಗಾರನ ದುರಂತ ಸಾವು

ಹಾವೇರಿ ಜಿಲ್ಲೆಯ ಪ್ರಜಾವಾಣಿ ವರದಿಗಾರ ಮಂಜುನಾಥ್ (30)  ಇಲ್ಲಿನ ಕೊಡಗುನೂರಿನ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಮೃತ ಮಂಜುನಾಥ್
ಮೃತ ಮಂಜುನಾಥ್
Updated on

ದಾವಣಗೆರೆ : ಹಾವೇರಿ ಜಿಲ್ಲೆಯ ಪ್ರಜಾವಾಣಿ ವರದಿಗಾರ ಮಂಜುನಾಥ್ (30)  ಇಲ್ಲಿನ ಕೊಡಗುನೂರಿನ ಬಳಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

 ಮಂಜುನಾಥ್ ಪ್ರಜಾವಾಣಿ ಪತ್ರಿಕೆಯಲ್ಲಿ ಕ್ರೈಂ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು.  ಹೊಳಲ್ಕೆರೆಯಲ್ಲಿರುವ ಅಕ್ಕನ ಮನೆಗೆ ಹಾವೇರಿಯಿಂದ ಬೈಕ್ ನಲ್ಲಿ ಹೋಗುತ್ತಿದ್ದಾಗ ಟ್ರಾಕ್ಟರ್ ಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಟ್ರಾಕ್ಟರ್ ಸಮೇತ ಚಾಲಕ ಪರಾರಿಯಾಗಿದ್ದಾನೆ.

ಶವವನ್ನು ದಾವಣಗೆರೆ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇಡಲಾಗಿದೆ. ಅಂತ್ಯಸಂಸ್ಕಾರ ಗುರುವಾರ ಶಿವಮೊಗ್ಗದಲ್ಲಿ ನಡೆಯಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com