ಲಕ್ಷ್ಮಣ ಸವದಿ
ರಾಜ್ಯ
ಮಹಾರಾಷ್ಟ್ರದ ನೂತನ ಮೈತ್ರಿಕೂಟ ಸರ್ಕಾರಕ್ಕೆ ಡಿಸಿಎಂ ಸವದಿ ಅಭಿನಂದನೆ
ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.
ಬೆಂಗಳೂರು: ಮಹಾರಾಷ್ಟ್ರದಲ್ಲಿ ಬಿ.ಜೆ.ಪಿ ಮತ್ತು ಎನ್ಸಿಪಿ ಪಕ್ಷಗಳ ಮೈತ್ರಿಕೂಟ ಅಧಿಕಾರಕ್ಕೆ ಬಂದಿರುವುದು ಸಂತೋಷದ ಸಂಗತಿ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರತಿಕ್ರಿಯಿಸಿದ್ದಾರೆ.
ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರಿಗೂ ನನ್ನ ಹಾರ್ದಿಕ ಅಭಿನಂದನೆಗಳು.
ಈ ನೂತನ ಮೈತ್ರಿಕೂಟದ ಸರ್ಕಾರ ಜನರ ಆಶೋತ್ತರಗಳಿಗೆ ಸ್ಪಂದಿಸಿ ಅಭಿವೃದ್ಧಿಯ ಹೊಸ ಮನ್ವಂತರಕ್ಕೆ ನಾಂದಿಯಾಗಲಿ ಎಂದು ನಾನು ಹಾರೈಸುತ್ತೇನೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ