ಮಲೆಮಹಾದೇಶ್ವರ ಬೆಟ್ಟ: ದೀಪಾವಳಿ‌ ಜಾತ್ರೆಯಲ್ಲಿ ಸಂಗ್ರಹವಾಯ್ತು ಬರೋಬ್ಬರಿ 1.71 ಕೋಟಿ ಕಾಣಿಕೆ

ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಹುಂಡಿ ಎಣಿಕೆ ಕಾರ್ಯ
ಹುಂಡಿ ಎಣಿಕೆ ಕಾರ್ಯ

ಚಾಮರಾಜನಗರ: ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ರಾಜ್ಯದ ಎರಡನೇ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು ಹುಂಡಿ ಎಣಿಕೆ ನಡೆದಿದ್ದು ‌1,71,14,219 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಎಣಿಕೆಯಲ್ಲಿ ನಿರತರಾದ ಸಿಬ್ಬಂದಿ ಶ್ರೀಕ್ಷೇತ್ರದಲ್ಲಿ ನಡೆಯುವ ದೀಪಾವಳಿ ಜಾತ್ರೆಗಳಲ್ಲೇ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ‌ ರೂ.,ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು ದೀಪಾವಳಿ ಜಾತ್ರೆಯಲ್ಲಿ ಇದೇ ಹೆಚ್ಚಿನ‌ ಸಂಗ್ರಹ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.

ಉಳಿದಂತೆ 45 ಗ್ರಾಂ ಚಿನ್ನ, 2.6 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಏಳುಮಲೆ ಒಡೆಯನಿಗೆ ಭಕ್ತರು ಅರ್ಪಿಸಿದ್ದಾರೆ. ಹುಂಡಿ ಎಣಿಕೆಯು ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬಿಗಿ ಬಂದೋಬಸ್ತ್‌ನೊಂದಿಗೆ ಸಾಲೂರು ಮಠದ ಹಿರಿಯಶ್ರೀ ನೇತೃತ್ವದಲ್ಲಿ ನಡೆಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com