ಶಾಸಕ ಯು.ಟಿ.ಖಾದರ್ ಅವರಿಗೆ ಗನ್‌ ಮ್ಯಾನ್ ಭದ್ರತೆ

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್‌ ಮ್ಯಾನ್‌ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.
ಯು.ಟಿ ಖಾದರ್
ಯು.ಟಿ ಖಾದರ್

ಮಂಗಳೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದ ಬೆನ್ನಲ್ಲೇ ಮತ್ತೋರ್ವ ಮುಸ್ಲಿಂ ಸಮುದಾಯದ ಕಾಂಗ್ರೆಸ್ ಶಾಸಕ ಯು.ಟಿ.ಖಾದರ್ ಅವರಿಗೆ ಮಂಗಳೂರು ನಗರ ಪೊಲೀಸರು ಗನ್‌ ಮ್ಯಾನ್‌ ಒಬ್ಬರನ್ನು ಭದ್ರತೆಗೆ ನಿಯೋಜಿಸಿದ್ದಾರೆ.

ಮಾಜಿ ಸಚಿವ ಯು. ಟಿ. ಖಾದರ್ ಅವರಿಗೆ ಗನ್ ಮ್ಯಾನ್ ಭದ್ರತೆ ಒದಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಖಾದರ್ ಪ್ರಸ್ತುತ ಹುಣಸೂರು ವಿಧಾನಸಭೆಯ ಉಪಚುನಾವಣೆಯ ಪ್ರಚಾರದಲ್ಲಿ ನಿರತರಾಗಿದ್ದು, ಭದ್ರತೆಯನ್ನು ಅಲ್ಲಿಂದಲೇ ಒದಗಿಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹತ್ಯೆ ಯತ್ನ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಪ್ರಕರಣ ಕುರಿತಾದ ಪೊಲೀಸ್ ತನಿಖೆಯಲ್ಲಿ ಅಘಾತಕಾರಿ ಮಾಹಿತಿ ಬಯಲಾಗಿದ್ದು ಮಾಜಿ ಸಚಿವ ಯು.ಟಿ ಖಾದರ್‌ ಮತೀಯ ಸಂಘಟನೆಯೊಂದರ 'ಹಿಟ್ ಲಿಸ್ಟ್' ನಲ್ಲಿದ್ದಾರೆ  ಎಂಬ ವಿಚಾರ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾದರ್ ಅವರಿಗೆ ಮಂಗಳೂರು ಪೊಲೀಸರು ಭದ್ರತೆ ನೀಡಿದ್ದಾರೆ. ಭದ್ರತೆಗಾಗಿ ಓರ್ವ ಗನ್ ಮೆನ್‌ನನ್ನು ನಿಯೋಜಿಸಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com