ಮಾರಣಾಂತಿಕ‌ ಹಲ್ಲೆಗೊಳಗಾಗಿದ್ದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಾರಣಾಂತಿಕ‌ ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. 
ತನ್ವೀರ್ ಸೇಠ್
ತನ್ವೀರ್ ಸೇಠ್
Updated on

ಮೈಸೂರು: ಮಾರಣಾಂತಿಕ‌ ಹಲ್ಲೆಗೊಳಗಾಗಿ ಆಸ್ಪತ್ರೆ ದಾಖಲಾಗಿದ್ದ ಮಾಜಿ ಸಚಿವ, ಹಾಲಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರು ಸೋಮವಾರ ರಾತ್ರಿ ಡಿಸ್ಚಾರ್ಜ್ ಆಗಿದ್ದಾರೆ. 

ನಗರದ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತನ್ವೀರ್ ಸೇಠ್ ಅವರು ಇಂದು ರಾತ್ರಿ ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ. 
ಶಾಸಕರ ಆರೋಗ್ಯದಲ್ಲಿ ಚೇತರಿಕೆ ಕಂಡ ಹಿನ್ನೆಲೆಯಲ್ಲಿ ವೈದ್ಯರು ಡಿಸ್ಚಾರ್ಜ್ ಆಗುವಂತೆ ಸೂಚಿಸಿದ್ದು, ಮನೆಯಲ್ಲೆ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ.

ಕಳೆದ ನೆವೆಂಬರ್ 17 ರಂದು ತನ್ವೀರ್ ಸೇಠ್ ಮೇಲೆ ಎಸ್‌ಡಿಪಿಐ ಕಾರ್ಯಕರ್ತ ಫರ್ಹಾನ್ ಪಾಷಾ ಎಂಬಾತ ಕೊಲೆ ಯತ್ನ ನಡೆಸಿದ್ದ. ಮದುವೆ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿತ್ತು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ(ಎಸ್ಐಟಿ) ಫರ್ಹಾನ್ ಪಾಷಾ ಹಾಗೂ ಇತರೆ ಐವರನ್ನು ಬಂಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com