ಸಂದೇಶ್ ಬಂಗೇರಾ
ರಾಜ್ಯ
ಮಂಗಳೂರಿನಲ್ಲಿ ಮರುಕಳಿಸಿದ ಗ್ಯಾಂಗ್ ವಾರ್, ದುಷ್ಕರ್ಮಿಗಳ ತಂಡದಿಂದ ವ್ಯಕ್ತಿ ಕೊಲೆ
ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸುರತ್ಕಲ್ ನಲ್ಲಿ ನಡೆದಿದೆ
ಮಂಗಳೂರು: ವ್ಯಕ್ತಿಯೋರ್ವನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಸುರತ್ಕಲ್ ನಲ್ಲಿ ನಡೆದಿದೆ.
33 ವರ್ಷದ ಸಂದೇಶ್ ಬಂಗೇರಾ ಕೊಲೆಯಾದಾತ.
ಗುಂಪಾಗಿ ಬಂದ ದುಷ್ಕರ್ಮಿಗಳ ತಂಡವೊಂದು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪರಿಣಾಮ ಸಂದೇಶ್ ಮೃತಪಟ್ಟಿದ್ದು, ಹಲ್ಲೆಯಿಂದ ನವೀನ್ ಎಂಬಾತ ಗಂಭೀರವಾಗಿ ಗಾಯಗೊಂಡಿದ್ದಾನೆ.
ಶುಕ್ರವಾರ ರಾತ್ರಿ ಸುರತ್ಕಲ್ ನ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಘಟನೆ ನಡೆದಿದೆ. ಪೋಲೀಸರು ಸ್ಥಳಕ್ಕಾಗಮಿಸಿ ಸಂದೇಶ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದು ತನಿಖೆ ನಡೆದಿದ್ದಾರೆ.
ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ