ಸ್ವಪಕ್ಷದಿಂದಲೇ ಹೆಚ್ಚಿದ ಒತ್ತಡ: ಬಳ್ಳಾರಿ ವಿಭಜನೆಗೆ ಸಿಎಂ ಯಡಿಯೂರಪ್ಪ ಬ್ರೇಕ್

ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ...
ಸಿಎಂ ಯಡಿಯೂರಪ್ಪ
ಸಿಎಂ ಯಡಿಯೂರಪ್ಪ
Updated on

ಬೆಂಗಳೂರು: ಸ್ವಪಕ್ಷದಿಂದಲೇ ಒತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆ ವಿಭಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಬುಧವಾರ ತಡೆ ನೀಡಿದ್ದಾರೆ. 

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಿನ್ನೆ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ ಈ ಸಂಬಂಧ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಪ್ರಸ್ತಾಪಕ್ಕೆ ತಾತ್ಕಾಲಿಕ ತಡೆ ನೀಡಲಾಗಿದೆ ಎಂದು ತಿಳಿದುಬಂದಿದೆ. 

ಉಪಚುನಾವಣೆ ಪೂರ್ಣಗೊಂಡ ಬಳಿಕ ಈ ಬಗ್ಗೆ ಮತ್ತೊಮ್ಮೆ ಸಭೆ ನಡೆಸಲಿರುವ ಸಿಎಂ ಯಡಿಯೂರಪ್ಪ ಅವರು, ಸಭೆ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಆಶ್ವಾಸನೆ ನೀಡಿದ್ದಾರೆ. 

ಸಭೆಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ಸೇರಿ ಬಳ್ಳಾರಿ ಜಿಲ್ಲೆಯ ಶಾಸಕರು, ವಿಧಾನಪರಿಷತ್ ಸದಸ್ಯರು, ಸಂಸದರು ಭಾಗವಹಿಸಿದ್ದರು. ಈ ವೇಳೆ ಅಖಂಡ ಜಿಲ್ಲೆಗಾಗಿ ಶಾಸಕರಾದ ಸೋಮಶೇಖರ್ ರೆಡ್ಡಿ, ಪಿ.ಟಿ.ಪರಮೇಶ್ವರ್ ನಾಯ್ಕ್ ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ಹಲವು ನಾಯಕರು ಒತ್ತಾಯಿಸಿದರು. 

ಅನರ್ಹಗೊಂಡಿರುವ ಶಾಸಕ ಆನಂದ್ ಸಿಂಗ್, ಕಾಂಗ್ರೆಸ್ ಮುಖಂಡ ಕೊಂಡಯ್ಯ ಮತ್ತಿತರರು ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚನೆ ಮಾಡಬೇಕೆಂದು ಈ ವೇಳೆ ಆಗ್ರಹಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com