ಹಾವೇರಿ: ಕಾಲೇಜು ಮೈದಾನದಲ್ಲೇ ವಿದ್ಯಾರ್ಥಿ ಆತ್ಮಹತ್ಯೆ

ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾವೇರಿ ನಗರದಲ್ಲಿ ಬುಧವಾರ ಸಂಜೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹಾವೇರಿ: ಪ್ರೇಮ ವೈಫಲ್ಯದಿಂದ ಬೇಸತ್ತು ವಿದ್ಯಾರ್ಥಿಯೋರ್ವ ಕಾಲೇಜು ಮೈದಾನದಲ್ಲೇ ಆತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಜಿ.ಎಚ್.ಕಾಲೇಜಿನಲ್ಲಿ ಬುಧವಾರ ಸಂಜೆ ನಡೆದಿದೆ.
  
ಹಾವೇರಿ ತಾಲೂಕಿನ ದೇವಗೇರಿ ಗ್ರಾಮದ ಜಗದೀಶ್​ ಯಲ್ಲಾಪುರ (19) ಎಂಬಾತ ಪ್ರೇಮ ವೈಫಲ್ಯದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.
  
ಜಿ.ಎಚ್​. ಕಾಲೇಜಿನಲ್ಲಿ ದ್ವಿತೀಯ ಬಿಎಸ್ಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆತ ತನ್ನದೇ ಕಾಲೇಜಿನ ಯುವತಿಯನ್ನು ಪ್ರೇಮಿಸುತ್ತಿದ್ದ. ಆದರೆ, ಆಕೆ ಆತನ ಪ್ರೇಮ ನಿವೇದನೆ ತಿರಸ್ಕರಿಸಿದ ಹಿನ್ನೆಲೆಯಲ್ಲಿ ಮನನೊಂದು ಆತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. 
ಘಟನೆಗೆ ಸಂಬಂಧಿಸಿದಂತೆ ಹಾವೇರಿ ನಗರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com