ಬೆಂಗಳೂರು:16 ವರ್ಷದ ಬಾಲಕಿಗೆ ಅಪರೂಪದ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು!

ಸಪ್ತಗಿರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಹೃದಯ ತಜ್ಞರು  16 ವರ್ಷದ ಬಾಲಕಿಗೆ ಅಪರೂಪದ ಹೃದಯ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.
ರೋಗಿಯೊಂದಿಗೆ ವೈದ್ಯರು
ರೋಗಿಯೊಂದಿಗೆ ವೈದ್ಯರು
Updated on

ಬೆಂಗಳೂರು: ಸಪ್ತಗಿರಿ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕೇಂದ್ರದ ಹೃದಯ ತಜ್ಞರು  16 ವರ್ಷದ ಬಾಲಕಿಗೆ ಅಪರೂಪದ ಹೃದಯ ಶಸ್ತ್ರ ಚಿಕಿತ್ಸೆ ನಡೆಸಿದ್ದಾರೆ.

ಪಶ್ಚಿಮ ಬಂಗಾಳದಿಂದ ಬಂದಿದ್ದ ರುಮಾ ಪ್ರವೀಣ್ ಎಂಬ ಬಾಲಕಿಯ ಎದೆಯಲ್ಲಿ 2 ಇಂಚಿನಷ್ಟು ಶಸ್ತ್ರಚಿಕಿತ್ಸೆಯ ಅಗತ್ಯವಿತ್ತು. ಇದಕ್ಕೆ ಲಕ್ಷಾಂತರ ರೂಪಾಯಿ ವೆಚ್ಚ ಮಾಡುವ ಬದಲು ಕವಾಟವನ್ನು ಸರಿಪಡಿಸಬೇಕೆಂದು ಭಾವಿಸಿದ ವೈದ್ಯರು, ಸ್ವಲ್ಪ ಕಡಿಮೆ ವೆಚ್ಚದಲ್ಲಿಯೇ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಕಡಿಮೆ ರಕ್ತಸ್ರಾವವಾಗಿದೆ.  ವೇಗವಾಗಿ ಚೇತರಿಸಿಕೊಳ್ಳುತ್ತಿದ್ದಾರೆ. ಅಲ್ಲದೇ ಆಸ್ಪತ್ರೆಯ ವಾಸ್ತವ್ಯದ ಅವಧಿಯನ್ನು ಕಡಿತಗೊಳಿಸಲಾಗಿದೆ. 

ಮಾಧ್ಯಮ ಪ್ರತಿನಿಧಿಗಳೊಂದಿಗೆ ಈ ಕುರಿತು ವಿವರಿಸಿದ ವೈದ್ಯರು, ಇಂತಹ ಪ್ರಕರಣಗಳಲ್ಲಿ ಸಾಮಾನ್ಯವಾಗಿ ತೆರೆದ ಹೃದಯ ಶಸ್ತ್ರ ಚಿಕಿತ್ಸೆಯನ್ನೇ ನಡೆಸಲಾಗುತ್ತದೆ. ಅಲ್ಲದೇ, ಕವಾಟ ಬದಲಿಸುವುದಕ್ಕೆ ಲಕ್ಷಾಂತರ ರೂಪಾಯಿ ವೆಚ್ಚವಾಗುತ್ತದೆ. ಈ ವಿಧಾನದಿಂದ ಮಿದುಳಿನಲ್ಲಿ ರಕ್ತಸ್ರಾವವೂ ಆಗುವ ಆಪಾಯವಿರುತ್ತದೆ. ಆದರೆ, ಈ ಪ್ರಕರಣದಲ್ಲಿ ಈ ಯಾವ ಸಮಸ್ಯೆಯೂ ಆಗಲಿಲ್ಲ ಎಂದರು. 

ರಾಜ್ಯ ಹಾಗೂ ಹೊರ ರಾಜ್ಯದಲ್ಲಿನ ಸಾಮಾಜಿಕ ಹಾಗೂ ಆರ್ಥಿಕವಾಗಿ ಕೆಳಗಿರುವ ಸಹಸ್ರಾರು ರೋಗಿಗಳಿಗೆ ಈ ಶಸ್ತ್ರ ಚಿಕಿತ್ಸೆ ಅನುಕೂಲಕರವಾಗಲಿದೆ. ಈ ತಂತ್ರಜ್ಞಾನ ಮತ್ತು ಕೌಶಲ್ಯವನ್ನು  ಪಾಶ್ಚಿಮಾತ್ಯ ದೇಶಗಳೂ ಸಹ ವರ್ಗಾಯಿಸಲಾಗುತ್ತದೆ ಎಂದು ವೈದ್ಯ ತಾಮೀನ್ ಅಹ್ಮದ್ ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com