ಗೃಹ ಸಚಿವ ಬಸವರಾಜ ಬೊಮ್ಮಾಯಿ
ಗೃಹ ಸಚಿವ ಬಸವರಾಜ ಬೊಮ್ಮಾಯಿ

ಅಕ್ರಮ ವಲಸಿಗರ ಸಮಸ್ಯೆ ನಿವಾರಣೆಗೆ ರಾಜ್ಯದಲ್ಲೂ ಎನ್.ಆರ್.ಸಿ ಜಾರಿಗೆ ಚಿಂತನೆ: ಗೃಹ ಸಚಿವ

ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಅಕ್ರಮ ವಲಸಿಗರ ಸಮಸ್ಯೆಗೆ ಪರಿಹಾರ ಸೂಚಿಸುವ ರಾಷ್ಟ್ರೀಯ ನಾಗರಿಕ ನೋಂದಣಿ (ಎನ್‌ಆರ್‌ಸಿ)ನ ನಿಯಮಾವಳಿಗಳನ್ನು ರಾಜ್ಯದಲ್ಲೂ ಜಾರಿಗೆ ತರಲು ಪರಿಶೀಲಿಸಲಾಗುತ್ತಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಸ್ಸಾಂ ರಾಜ್ಯದಲ್ಲಿ ಎನ್.ಆರ್.ಸಿ. ಜಾರಿಗೊಳಿಸಲು ತೀರ್ಮಾನಿಸಿದ್ದು, ರಾಜ್ಯದಲ್ಲೂ ಇದನ್ನು ಅನುಷ್ಠಾನಕ್ಕೆ ತರುವ ಬಗ್ಗೆ ಹಿರಿಯ ಅಧಿಕಾರಿಗಳ ಜತೆ ಚರ್ಚೆ ನಡೆಸಲಾಗಿದೆ. ಈ ಸಂಬಂಧ ಕೇಂದ್ರ ಗೃಹ ಸಚಿವರ ಜತೆಯೂ ಮಾತುಕತೆ ನಡೆಸಲಾಗುವುದು ಎಂದು ಹೇಳಿದರು.

ಬೆಂಗಳೂರಿನಲ್ಲಿ ಬಂಗ್ಲಾದೇಶೀಯರು ಸೇರಿದಂತೆ ಹಲವು ಮಂದಿ ವಲಸಿಗರಿದ್ದಾರೆ. ಅವರ ಚಟುವಟಿಕೆಗಳ ಮೇಲೆ ನಿಗಾ ಇಡುವ ಅಗತ್ಯವಿದೆ. ಈ ಕುರಿತು ಅಧ್ಯಯನ ನಡೆಸಿ ವರದಿ ನೀಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.

Related Stories

No stories found.

Advertisement

X
Kannada Prabha
www.kannadaprabha.com