ಚಿಕ್ಕಮಗಳೂರು: ಆಟೋ ಮೇಲೆ ಬಿದ್ದ ತೆಂಗಿನ ಮರ, ಕೂದಲೆಳೆ ಅಂತರದಲ್ಲಿ ಚಾಲಕ ಪಾರು

ನಗರದಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಆಟೋ ಮೇಲೆ ತೆಂಗಿನ ಮರವೊಂದು ಬಿದ್ದ ಪರಿಣಾಮ, ಕೂದಲೆಳೆ ಅಂತರದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 
ಆಟೋ ಮೇಲೆ ಬಿದ್ದ ತೆಂಗಿನ ಮರ, ಕೂದಲೆಳೆ ಅಂತರದಲ್ಲಿ ಚಾಲಕ ಪಾರು
ಆಟೋ ಮೇಲೆ ಬಿದ್ದ ತೆಂಗಿನ ಮರ, ಕೂದಲೆಳೆ ಅಂತರದಲ್ಲಿ ಚಾಲಕ ಪಾರು
Updated on

ಚಿಕ್ಕಮಗಳೂರು: ನಗರದಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಗೆ ಆಟೋ ಮೇಲೆ ತೆಂಗಿನ ಮರವೊಂದು ಬಿದ್ದ ಪರಿಣಾಮ, ಕೂದಲೆಳೆ ಅಂತರದಲ್ಲಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ.

ಕಾಳಿದಾಸ ನಗರದ ಹಲವು ಮನೆಗಳಿಗೆ ಚರಂಡಿ ನೀರು ನುಗ್ಗಿದ ಪರಿಣಾಮ ಅಲ್ಲಿನ ನಿವಾಸಿಗಳೆಲ್ಲ ರಾತ್ರಿಯಿಡೀ ನಿದ್ದೆ ಮಾಡದೇ ನೀರು ಹೊರಹಾಕಿದ್ದಾರೆ. ಅವೈಜ್ಞಾನಿಕ ಚರಂಡಿ ನಿರ್ಮಿಸಿರುವುದರಿಂದ ನಗರ ಸಭೆ ವಿರುದ್ಧ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮಲೆನಾಡು ಭಾಗದ ವಿವಿದೆಡೆ ಭಾರೀ ಮಳೆ ಹಾನಿ.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು.ಜನ್ನಾಪುರದಲ್ಲಿ ಆಟೋ ಮೇಲೆ ಬಿದ್ದ ತೆಂಗಿನ ಮರ.ಬಿದ್ದಿದೆ. ಆ ವೇಳೆ ಆಟೋದಲ್ಲಿ ಯಾರೂ ಇರದ ಕಾರಣ ಅನಾಹುತ ತಪ್ಪಿದೆ. ಘಟನೆಯಲ್ಲಿ ಆಟೋ ಸಂಪೂರ್ಣ ಜಖಂ ಆಗಿದೆ.

ಶನಿವಾರ ಜಿಲ್ಲೆಯ ಮೂಡಿಗೆರೆ, ಎನ್.ಆರ್. ಪುರ, ಕೊಪ್ಪ, ಶೃಂಗೇರಿಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ಮೂಡಿಗೆರೆಯಲ್ಲಿ ಸೇತುವೆಯೊಂದು ಕೊಚ್ಚಿ ಹೋಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com