ವಿಜಯಪುರ: ಕಾಣೆಯಾಗಿದ್ದ ಯುವತಿ ಮೃತದೇಹ ನೀರಿನ ಟ್ಯಾಂಕ್ ನಲ್ಲಿ ಪತ್ತೆ, ಕೊಲೆ ಶಂಕೆ

ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ನೀರಿನ ಟ್ಯಾಂಕ್
ನೀರಿನ ಟ್ಯಾಂಕ್
Updated on

ವಿಜಯಪುರ: ಮನೆಯಿಂದ ಕಾಣೆಯಾಗಿದ್ದ ಯುವತಿಯೋರ್ವಳ ಶವ ಮನೆಯ ಮುಂದಿನ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ವಿಜಯಪುರ ನಗರದ ವಿವೇಕ ನಗರದ ಮನೆಯ ಮುಂದಿನ ಟ್ಯಾಂಕ್ ನಲ್ಲಿ ರುಕ್ಮಿಣಿ ಉಪ್ಪಲದಿನ್ನಿ(24) ಅವರ ಶವವಾಗಿ ಪತ್ತೆಯಾಗಿದೆ.

ಕಳೆದ ರವಿವಾರ ಮನೆಯಿಂದ ರುಕ್ಮಿಣಿ ಉಪ್ಪಲದಿನ್ನಿ ಮನೆಯಿಂದ ಕಾಣೆಯಾಗಿದ್ದಾಳೆ ಎಂದು ಆಕೆಯ ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಕೊಳೆತ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ರುಕ್ಮಿಣಿಯನ್ನು ಕೊಲೆ ಮಾಡಲಾಗಿದೆ ಎಂದು ಆಕೆಯ ಪೋಷಕರು ಅನುಮಾನ ವ್ಯಕ್ತಪಡಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com