ಗಂಗಾವತಿ: ಮಹಾ ಮಳೆ; ಶ್ರೀಕೃಷ್ಣದೇವರಾಯನ ಸಮಾಧಿ ಜಲಾವೃತ

ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ.
ಕೃಷ್ಣದೇವರಾಯ
ಕೃಷ್ಣದೇವರಾಯ
Updated on

ಗಂಗಾವತಿ: ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ತುಂಗಭದ್ರಾ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ ಸಂಗ್ರಹವಾಗುತ್ತಿರುವ ಹೆಚ್ಚುವರಿ ನೀರನ್ನು ನದಿ ಮೂಲಕ ಹೊರಕ್ಕೆ ಬಿಡಲಾಗುತ್ತಿದೆ. 

ಪರಿಣಾಮ ತಾಲ್ಲೂಕಿನ ವಿದೇಶಿಗರ ಹಾಗೂ ಪ್ರವಾಸಿ ತಾಣವಾದ ವಿರುಪಾಪುರಗಡ್ಡೆ ಜಲಾವೃತವಾಗಿದೆ. ಅಲ್ಲದೇ ಆನೆಗೊಂದಿ ಸಮೀಪದ ಐತಿಹಾಸಿಕ ಶ್ರೀಕೃಷ್ಣದೇವರಾಯನ ಸಮಾಧಿ ಬಹುತೇಕ ಜಲಾವೃತವಾಗಿದೆ. 

ವಿರುಪಾಪುರಗಡ್ಡೆಯು ನಡುಗಡ್ಡೆಯಾಗಿದ್ದು, ಗ್ರಾಮದ ಸುತ್ತಲೂ ನದಿಯಿಂದ ಜಲಾವೃತವಾಗಿದೆ. ಹೀಗಾಗಿ ಜನ ಮತ್ತು ವಾಹನ ಸಂಚಾರ ಸಂಪೂರ್ಣ ಸ್ಥಗಿತವಾಗಿದೆ. ಆನೆಗೊಂದಿ ಸಮೀಪದ ನವವೃಂದಾವನಕ್ಕೂ ಸಂಪರ್ಕ ಕಡಿತವಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com