ರಾಜ್ಯ
ಬೆಂಗಳೂರು: ಐರಾವತ ಬಸ್ ಹರಿದು ಇಬ್ಬರು ದ್ವಿಚಕ್ರ ವಾಹನ ಸವಾರರು ದುರ್ಮರಣ
ಕೆಎಸ್ಆರ್ಟಿಯ ಐರಾವತ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಬೆಂಗಳೂರು: ಕೆಎಸ್ಆರ್ಟಿಯ ಐರಾವತ ಬಸ್ಸೊಂದು ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಂದಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಹೊಸಕೋಟೆ ತಾಲೂಕಿನ ಬಾಣಮಾಕನಹಳ್ಳಿ ಗೇಟ್ ಬಳಿ ಸಂಭವಿಸಿದೆ.
ಕೆ.ಆರ್.ಪುರಂನ ಎ.ನಾರಾಯಣಪುರದ ನಿವಾಸಿಗಳಾದ ನಾಗೇಶ್ (23) ಹಾಗೂ ತೇಜಸ್ (22) ಮೃತಪಟ್ಟವರು. ನಾಗೇಶ್ ಹಾಗೂ ತೇಜಸ್ ಕೆಟಿಎಂ ಬೈಕ್ನಲ್ಲಿ ಹೋಗುತ್ತಿದ್ದಾಗ ಬಾಣಮಾಕನಹಳ್ಳಿ ಗೇಟ್ ಬಳಿ ಬೈಕ್ ಏಕಾಏಕಿ ಆಯತಪ್ಪಿ ಬಿದ್ದಿದೆ. ಆದರೆ ಹಿಂದೆ ಬರುತ್ತಿದ್ದ ಐರಾವತ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದಿದೆ. ಪರಿಣಾಮ ಬೈಕ್ ಸವಾರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಂದಗುಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಬಸ್ ಚಾಲಕನನ್ನು ಬಂಧಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ. ಮೃತಪಟ್ಟವರ ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿತ್ತು.