ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು 

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು
ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು
Updated on

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ದೆಹಲಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. 

ಅ.23  ರಂದು ಕೋರ್ಟ್ ತೀರ್ಪು ಪ್ರಕಟಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ಡಿ.ಕೆ ಶಿವಕುಮಾರ್ ಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಡಿ.ಕೆ ಶಿವಕುಮಾರ್ ಅವರಿಂದ ಸಾಕ್ಷ್ಯನಾಶದ ಸಾಧ್ಯತೆಗಳು ಕಡಿಮೆ ಇರುವುದನ್ನು ಮನಗಂಡ ನ್ಯಾಯಾಲಯ ಜಾಮೀನು ಮಂಜೂರು ಮಾಡಲು ಅನುಮತಿ ನೀಡಿದೆ. .

25 ಲಕ್ಷ ರೂಪಾಯಿ ಬಾಂಡ್ ನೀಡುವುದು, ಪಾಸ್ಪೋರ್ಟ್ ನ್ನು ಕೋರ್ಟ್ ವಶಕ್ಕೆ ನೀಡಬೇಕು ಹಾಗೂ ವಿಚಾರಣೆಗೆ ಅಗತ್ಯವಿದ್ದಾಗ ಹಾಜರಾಗಬೇಕೆಂಬ ಷರತ್ತುಗಳನ್ನು ಕೋರ್ಟ್ ವಿಧಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com