ಡಿನೋಟಿಫಿಕೇಷನ್ ಪ್ರಕರಣ:ಮಾಜಿ ಮುಖ್ಯಮಂತ್ರಿ ಎಚ್ ಡಿಕೆಗೆ ಸಮನ್ಸ್ ಜಾರಿ 

ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ
Updated on

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ . ಡಿ. ಕುಮಾರಸ್ವಾಮಿ ಅವರಿಗೆ ಭೂ ಕಂಟಕ ಎದುರಾಗಿದೆ. ಹಲಗೆವಡೇರಹಳ್ಳಿಯ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಸಮನ್ಸ್ ಜಾರಿ ಮಾಡಿದೆ.

ಅಕ್ಟೋಬರ್ 4 ರಂದು ಖುದ್ಧು ವಿಚಾರಣೆಗೆ ಹಾಜರಾಗುವಂತೆ ನ್ಯಾಯಾಲಯ ಎಚ್ ಡಿ ಕುಮಾರಸ್ವಾಮಿ ಅವರಿಗೆ ಸಮನ್ಸ್ ನೀಡಿದೆ.

2007ರಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಬನಶಂಕರಿ 5ನೇ ಹಂತದಲ್ಲಿರುವ ಹಲಗೆ ವಡೇರಹಳ್ಳಿಯಲ್ಲಿ 2 ಎಕರೆ 24 ಗುಂಟೆ ಜಮೀನನ್ನು ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ 2012ರಲ್ಲಿ ಚಾಮರಾಜನಗರ ಜಿಲ್ಲೆಯ ಸಂತೇಮರಹಳ್ಳಿಯ ಮಹಾದೇವಸ್ವಾಮಿ ಎಂಬುವರು ದೂರು ದಾಖಲಿಸಿದ್ದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com