ಬೆಳಗಾವಿ: ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗು ಸಾವು

ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಳಗಾವಿ: ಬೆಳಗಾವಿಯ ರಾಮದುರ್ಗಾ ತಾಲೂಕಿನಲ್ಲಿ ಸರ್ಕಾರ ರಚಿಸಿದ್ದ ನೆರೆ ಪರಿಹಾರ ಕೇಂದ್ರದಲ್ಲಿದ್ದ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. 

ಹಲವು ದಿನಗಳಿಂದಲೂ ಮಗು ಅತೀವ್ರ ಜ್ವರದಿಂದ ಬಳಲುತ್ತಿತ್ತು. ಬಾಲಕನಿಗೆ ಜ್ವರ ಬಂದಾಗ ಚಿಕಿತ್ಸೆಗಾಗಿ ಪೋಷಕರು ಪರದಾಡಿದ್ದರು. ಆದರೆ, ಅಧಿಕಾರಿಗಳಿಂದ ಯಾವುದೇ ರೀತಿಯ ಸ್ಪಂದನೆಗಳು ದೊರೆಯಲಿಲ್ಲ ಎಂಬ ಆರೋಪಗಳು ಕೇಳಿ ಬಂದಿವೆ. 

ಆದರೆ ಆರೋಪಗಳನ್ನು ಅಧಿಕಾರಿಗಳು ಅಲ್ಲಗೆಳೆದಿದ್ದು, ಅತೀವ್ರ ಜ್ವರದಿಂದ ಸಾವನ್ನಪ್ಪಿದೆ ಎಂದು ಹೇಳಿದ್ದಾರೆ. 

ಇನ್ನು ಇದೇ ವೇಳೆ ರಾಮದುರ್ಗಕ್ಕೆ ಭೇಟಿ ನೀಡಿದ್ದ ಯಡಿಯೂರಪ್ಪ ಅವರು ಮಗುವಿನ ಪೋಷಕರಿಗೆ ರೂ.5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com