ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ: 200 ಪ್ರಯಾಣಿಕರು ಪಾರು

ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 
ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ
ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್‌ಗಳ ನಡುವೆ ಡಿಕ್ಕಿ
Updated on

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ಸಿಗಂಧೂರೇಶ್ವರಿ ದೇವಾಲಯಕ್ಕೆ ಹೋಗುವ ಶರಾವತಿ ಹಿನ್ನೀರಿನಲ್ಲಿ ಎರಡು ಲಾಂಜ್ ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. 

ಅಂಬಾರಗೋಡ್ಲು ದಡದಲ್ಲಿ ಬಾರ್ಜ್ ಗಳನ್ನು ತಿರುಗಿಸುವ ವೇಳೆ ಒಂದಕ್ಕೊಂದು ಗುದ್ದಿಕೊಂಡಿರುವ ಪರಿಣಾಮ ಎರಡೂ ಬಾರ್ಜ್ ಗಳು ಜಖಂಗೊಂಡಿವೆ. ನದಿಯ ಮಧ್ಯಭಾಗದಲ್ಲೇ ಈ ಅಪಘಾತ. ಸಂಭವಿಸಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಚಾಲಕರ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದ್ದು, ಇದರಲ್ಲಿ 200 ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಇವರೆಲ್ಲೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಚಾಲಕರ ನಿರ್ಲಕ್ಷ್ಯದಿಂದ ನಡೆದ ಈ ಅಪಘಾತದ ಬಗ್ಗೆ ಪ್ರಯಾಣಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಪಘಾತದ ಬಳಿಕವೂ ಎಂದಿನಂತೆ ಬಾರ್ಜ್ ಗಳು ಸಂಚಾರ ನಡೆಸುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com