ಮೈಸೂರು ದಸರಾ 2019: ಯುವ ದಸರಾ ಉದ್ಘಾಟನೆಗೆ ವಿಶ್ವ ಚಾಂಪಿಯನ್ ಪಿ.ವಿ.ಸಿಂಧುಗೆ ಅಧಿಕೃತ ಆಹ್ವಾನ

ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.
ಪಿ.ವಿ.ಸಿಂಧುಗೆ ದಸರಾ ಆಹ್ವಾನ
ಪಿ.ವಿ.ಸಿಂಧುಗೆ ದಸರಾ ಆಹ್ವಾನ
Updated on

ಮೈಸೂರು: ಮೈಸೂರು ದಸರಾ 2019 ಉತ್ಸವಕ್ಕೆ ದಿನಗಣನೆ ಆರಂಭವಾಗಿರುವಂತೆ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರನ್ನು ಯುವ ದಸರಾ ಉದ್ಘಾಟನೆಗೆ ಅಧಿಕೃತವಾಗಿ ಆಹ್ವಾನಿಸಲಾಗಿದೆ.

ನಾಲ್ಕು ದಿನಗಳ ಹಿಂದೆ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಪತ್ರ ಮುಖೇನ ಪಿ.ವಿ.ಸಿಂಧು ಅವರನ್ನು ಯುವ ದಸರಾ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದರು. ನಿನ್ನೆ ಸಂಸದ ಪ್ರತಾಪ್ ಸಿಂಹ ಅವರು ರಾಜ್ಯ ಸರ್ಕಾರದ ಪರವಾಗಿ ಶನಿವಾರ ಪಿವಿ ಸಿಂಧು ಅವರನ್ನು ಭೇಟಿ ಮಾಡಿ ಅಧಿಕೃತ ಆಹ್ವಾನ ನೀಡಿದ್ದಾರೆ. ಈ ವೇಳೆ ಪ್ರತಾಪ್ ಸಿಂಹ ಅವರೊಂದಿಗೆ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಷ್ಯಂತ್ ಅವರು ಕೂಡ ಸಾಥ್ ನೀಡಿದರು.

ಇತ್ತೀಚೆಗೆ ನಡೆದ ಬ್ಯಾಡ್ಮಿಂಟನ್ ವಿಶ್ವಚಾಂಪಿಯನ್ಶಿಪ್ ನಲ್ಲಿ ಚಿನ್ನದ ಪದಕ ಗೆದ್ದು ಸಾಧನೆ ಮಾಡಿದ ದೇಶದ ಮೊದಲ ಕ್ರೀಡಾಪಟು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಪಿ.ವಿ. ಸಿಂಧು ಅವರು ಅಕ್ಟೋಬರ್ 1ರಂದು ನಡೆಯಲಿರುವ ಯುವ ದಸರಾ 2019ರ ಉದ್ಘಾಟನೆಗೆ ಆಗಮಿಸಲಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com