ಬೆಂಗಳೂರು: ಉದ್ಯಮಿ ಪುತ್ರನ ಅಪಹರಣಕಾರರನ್ನು ಗುಂಡಿಕ್ಕಿ ಬಂಧಿಸಿದ ಪೊಲೀಸರು

ಉದ್ಯಮಿ ಸಿದ್ದರಾಜು ಅವರ ಪುತ್ರ ಮತ್ತು ಕಾರು ಚಾಲಕನನ್ನುಅಪಹರಿಸಿ 1.80 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದ ಇಬ್ಬರೂ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ನಗರದ ಹೊರವಲಯದ ಕಡಬಗೆರೆ ಬಳಿ ಪೊಲೀಸರು ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಉದ್ಯಮಿ ಸಿದ್ದರಾಜು ಅವರ ಪುತ್ರ ಮತ್ತು ಕಾರು ಚಾಲಕನನ್ನುಅಪಹರಿಸಿ 1.80 ಕೋಟಿ ರೂ. ಗೆ ಬೇಡಿಕೆ ಇಟ್ಟಿದ್ದ ಇಬ್ಬರೂ ಆರೋಪಿಗಳನ್ನು ಕಾಲಿಗೆ ಗುಂಡಿಕ್ಕಿ ನಗರದ ಹೊರವಲಯದ ಕಡಬಗೆರೆ ಬಳಿ ಪೊಲೀಸರು ಬಂಧಿಸಿದ್ದಾರೆ.

ಅಪಹರಣಕಾರ ಸಂಗುಬಾಳ ಪ್ರಶಾಂತ್, ಸತೀಶ್ ಎಂಬುವವರ ಬಂಧನಕ್ಕೆ ಪೊಲೀಸರು ವಿಶೇಷ ತಂಡ ರಚಿಸಿದ್ದರು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಆರೋಪಿಗಳನ್ನು ಬಂಧಿಸಲು ಮುಂದಾದಾಗ, ಪೊಲೀಸರ ಮೇಲೆಯೇ ಅವರು ಹಲ್ಲೆ ನಡೆಸಲು ಯತ್ನಿಸಿದ್ದರು. ಈ ವೇಳೆ ಆತ್ಮರಕ್ಷಣೆಗಾಗಿ ಮಾದನಾಯಕನಹಳ್ಳಿ ಇನ್ಸ್ ಪೆಕ್ಟರ್ ಸತ್ಯನಾರಾಯಣ ಆರೋಪಿಗಳ ಕಾಲಿಗೆ ಗುಂಡಿಕ್ಕಿದ್ದಾರೆ.

ಘಟನೆಯಲ್ಲಿ ಹೇಮಂತ್, ಮುರುಳಿಧರ್, ದೊಡ್ಡಬಳ್ಳಾಪುರ ಹೆಡ್ ಕಾನ್ಸ್ ಟೆಬಲ್ ಮಧು ಅವರಿಗೂ ಗಾಯಗಳಾಗಿದ್ದು, ಪೊಲೀಸ್ ಹಾಗೂ ಆರೋಪಿಗಳಿಗೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಿವಿಎಸ್ ಶೋ ರೂಮ್ ಮಾಲೀಕ ಸಿದ್ಧರಾಜು ಅವರ ಪುತ್ರ ಹೇಮತ್(17) ಮತ್ತು ಚಾಲಕ ಕೇಶವ್(24) ಇತ್ತೀಚಿಗೆ ನಾಪತ್ತೆಯಾಗಿದ್ದರು. ರಾಜಾನುಕುಂಟೆ ಬಳಿಯ ಆರ್ ಟಿ ನಗರ ಪಬ್ಲಿಕ್ ಶಾಲೆಯಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದ ಹೇಮಂತನನ್ನು ಚಾಲಕ ಕೇಶವ್ ಅವರು ಟ್ಯೂಷನ್ ಗೆಂದು ಕಾರಿನಲ್ಲಿ ಕರೆದುಕೊಂಡು ಹೊಗಿದ್ದರು. ವಾಪಸ್ ಬರುವಾಗ ಕಾಲೇಜ್ ಬಳಿ ಕಾರು ಹತ್ತುತ್ತಿದ್ದಾಗ ದುಷ್ಕರ್ಮಿಗಳು  ಇಬ್ಬರನ್ನು ತಮ್ಮ ಕಾರಿನೊಳಗೆ ಎಳೆದುಕೊಂಡು ಪರಾರಿಯಾಗಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com