ಬೆಂಗಳೂರು: ಭಾರತ-ದ.ಆಫ್ರಿಕಾ ಪಂದ್ಯಕ್ಕೆ ಬಿಎಂಟಿಸಿ ಹೆಚ್ಚುವರಿ ಬಸ್

ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ (ಸೆ.22)ರಂದು ಸಂಜೆ 7ಕ್ಕೆ ನಿಗದಿಗೊಂಡಿರುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲು ಮುಂದಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾನುವಾರ (ಸೆ.22)ರಂದು ಸಂಜೆ 7ಕ್ಕೆ ನಿಗದಿಗೊಂಡಿರುವ ಭಾರತ-ದಕ್ಷಿಣ ಆಫ್ರಿಕಾ ಟಿ-20 ಕ್ರಿಕೆಟ್ ಪಂದ್ಯದ ವೀಕ್ಷಣೆಗೆ ಬರುವ ಸಾರ್ವಜನಿಕರ ಅನುಕೂಲಕ್ಕಾಗಿ ಬಿಎಂಟಿಸಿ ಹೆಚ್ಚುವರಿ ಬಸ್ ಕಾರ್ಯಾಚರಣೆಗೊಳಿಸಲು ಮುಂದಾಗಿದೆ. 

ರಾತ್ರಿ 11.30ಕ್ಕೆ ಪಂದ್ಯ ಅಂತ್ಯಗೊಳ್ಳಲಿದ್ದು, ಬಳಿಕ ಸ್ಟೇಡಿಯಂ ನಿಂದ ಮನೆಗೆ ತೆರಳಲು ಪ್ರಯಾಣಿಕರ ಒತ್ತಡಕ್ಕೆ ಅನುಗುಣವಾಗಿ ಹೆಚ್ಚುವರಿ ಬಸ್ ಕಾರ್ಯಾಚರಿಸಲಾಗುವುದು. 

ಶಿವಾಜಿನಗರ-ಕಾಡುಗೋಡಿ ಬಸ್ ನಿಲ್ದಾಣ, ಮೆಯೋಹಾಲ್-ಸರ್ಜಾಪುರ, ಬ್ರಿಗೇಡ್ ರಸ್ತೆ-ಎಲೆಕ್ಟ್ರಾನಿಕ್ ಸಿಟಿ, ಬನ್ನೇರುಘಟ್ಟ ನ್ಯಾಷನಲ್ ಪಾರ್ಕ್, ಶಾಂತಿನಗರ ಬಸ್ ನಿಲ್ದಾಣ-ಕೆಂಗೇರಿ ಕೆಎಚೆ'ಬಿ ಕ್ವಾರ್ಟ್ರಸ್, ಕೆಂಪೇಗೌಡ ಬಸ್ ನಿಲ್ದಾಣ-ಜನಪ್ರಿಯ ಲೈಔಟ್, ಎಂ.ಜಿರಸ್ತೆ ಮೆಟ್ರೋ ನಿಲ್ದಾಣ-ನೆಲಮಂಗಲ, ಯಲಹಂಕ 5ನೇ ಹಂತ, ಬಾಗಲೂರು, ಕೆ.ಆರ್.ಮಾರುಕಟ್ಟೆ-ಆರ್.ಕೆ.ಹೆಗಡಿ ನಗರ ಮಾರ್ಗದಲ್ಲಿ ಬಸ್ ಗಳು ಸಂಚಾರ ನಡೆಸಲಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com