ಉಪಚುನಾವಣೆ ಹಿನ್ನೆಲೆ : ಚಳಿಗಾಲದ ಅಧಿವೇಶನ 3 ದಿನಕ್ಕೆ ಸೀಮಿತಗೊಳಿಸಲು ಸಂಪುಟ ತೀರ್ಮಾನ

ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ‌.
ವಿಧಾನಸೌಧ
ವಿಧಾನಸೌಧ
Updated on

ಬೆಂಗಳೂರು: ಉಪಚುನಾವಣೆ ಹಿನ್ನೆಲೆಯಲ್ಲಿ ಚಳಿಗಾಲದ ಅಧಿವೇಶನವನ್ನು ಅಕ್ಟೋಬರ್ 10-12ರ ವರೆಗೆ ಮೂರು ದಿನಗಳಿಗೆ ಮೊಟಕುಗೊಳಿಸಲು ಸಂಪುಟ ಸಭೆ ತೀರ್ಮಾನಿಸಿದೆ‌.

ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ, ಈಕಳೆದ ಸಚಿ ವ ಸಂಪುಟ ಸಭೇಯಲ್ಲಿ ವಿಧಾನ ಮಂಡಲಗಳ ಅಧಿವೇಶನವನ್ನು ಅಕ್ಟೋಬರ್ 14 ರಿಂದ 26 ವರೆಗೆ ನಡೆಸಲು ಉದ್ದೇಶಿಸಲಾಗಿತ್ತು. ಆದರೆ ಉಪ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಅಧಿವೇಶನವನ್ನು ಅಕ್ಟೋಬರ್ 10ರಿಂದ 12ರ ವೆರೆಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ಈ ಅಧಿವೇಶನದಲ್ಲಿ ಹಣಕಾಸು ಮಸೂದೆ ಬಿಟ್ಟು ಬೇರೆ ಯಾವುದೇ ವಿಷಯಗಳ ಬಗ್ಗೆ ಚರ್ಚೆ ನಡೆಸುವುದಿಲ್ಲ.ಜತೆಗೆ ಪೂರಕ‌ ಅಂದಾಜಿಗೂ ಅನುಮೋದನೆ ಪಡೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com