ಫೋನ್ ಟ್ಯಾಪಿಂಗ್:ಸಿಬಿಐ ವಿಚಾರಣೆ ಬೆನ್ನಲ್ಲೇ ಐಪಿಎಸ್‌ ಅಲೋಕ್‌ ಕುಮಾರ್‌ ವರ್ಗಾವಣೆ

ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ. 
ಅಲೋಕ ಕುಮಾರ್
ಅಲೋಕ ಕುಮಾರ್
Updated on

ಬೆಂಗಳೂರು: ದೂರವಾಣಿ ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಅಧಿಕಾರಿಗಳು ಕೆಎಸ್‌ಆರ್‌ಪಿ ಎಡಿಜಿಪಿ ಅಲೋಕ್ ಕುಮಾರ್ ಅವರನ್ನು ಸತತ ಎರಡು ದಿನಗಳ ಕಾಲ ವಿಚಾರಣೆಗೆ ಒಳಪಡಿಸಿದ ಬೆನ್ನಲ್ಲೇ ಅಲೋಕ್ ಅವರನ್ನು ಆ ಹುದ್ದೆಯಿಂದ ವರ್ಗಾವಣೆ ಮಾಡಲಾಗಿದೆ.

ಆದರೆ ಅವರಿಗೆ ಸ್ಥಳ ನಿಯೋಜನೆ ಮಾಡಲಾಗಿಲ್ಲ. ಅಲೋಕ್ ಕುಮಾರ್ ಹುದ್ದೆಯನ್ನು ಪಿ.ಎಸ್. ಸಂಧು ಅವರಿಗೆ ಹೆಚ್ಚುವರಿಯಾಗಿ ವಹಿಸಲಾಗಿದೆ. ಪ್ರಸ್ತುತ ಸಂಧು ಅವರು ಸಿಟಿಆರ್‌ಎಸ್ ಎಡಿಜಿಪಿಯಾಗಿದ್ದು, ಹೆಚ್ಚುವರಿಯಾಗಿ ಕೆಎಸ್‌ಆರ್‌ಪಿ ಎಡಿಜಿಪಿ ಹುದ್ದೆಯನ್ನೂ ನೋಡಿಕೊಳ್ಳಲಿದ್ದಾರೆ.

ಮೈತ್ರಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ದೂರವಾಣಿ ಕದ್ದಾಲಿಕೆಯಲ್ಲಿ ಅಂದಿನ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಅಲೋಕ್ ಕುಮಾರ್ ಅವರ ಹೆಸರು ಕೇಳಿಬಂದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com