ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ, ಪತಿ ಮೇಲೆ ಕೊಲೆ ಶಂಕೆ

ಮನೆಯೊಂದರಲ್ಲಿ ವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಬೇಗೂರು ಬಳಿ ನಡೆದಿದೆ.
ಮೃತ ನಂದಿನಿ ಹಗೂ ಆಕೆಯ ಪತಿ ಮಧು
ಮೃತ ನಂದಿನಿ ಹಗೂ ಆಕೆಯ ಪತಿ ಮಧು
Updated on

ಬೆಂಗಳೂರು: ಮನೆಯೊಂದರಲ್ಲಿ ವಿವಾಹಿತ ಮಹಿಳೆಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ ಬೇಗೂರು ಬಳಿ ನಡೆದಿದೆ.

ಚಾಮುಂಡೇಶ್ವರಿ ನಗರದ ನಂದಿನಿ ಮೃತ ದುರ್ದೈವಿ. ಇವರು 10 ವರ್ಷಗಳ ಹಿಂದೆ ಮಧು ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದರು. ಪತಿ ಮಧು, ನಂದಿನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ ಬಳಿಕ ಶವ ಬಿಟ್ಟು ಮನೆಯಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಪೋಷಕರು ಹಲವು ಬಾರಿ ನಂದಿನಿಗೆ ಕರೆ ಮಾಡಿದ್ದಾರೆ. ಆದರೆ, ಮನೆಯಲ್ಲಿ ಯಾರು ಕರೆ ಸ್ವೀಕರಿಸಿಲ್ಲ. ಇದರಿಂದ ಗಾಬರಿಗೊಂಡು ಪೋಷಕರು ಮನೆ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ಬೇಗೂರು ಠಾಣಾ ಪೋಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತಳ ಪತಿ ಮಧುವಿಗಾಗಿ ಶೋಧ ಕಾರ್ಯ ನಡೆದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com