ಬೆಂಗಳೂರು ದಕ್ಷಿಣ ಜಿಲ್ಲೆ ಬೇಗೂರು ತಾಲೂಕಿನ ಹುಳಿಮಾವು ಹೋಬಳಿಯಲ್ಲಿ ಸರ್ವೆ ನಂ. 52ರಲ್ಲಿನ ಬಫರ್ ವಲಯವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿ ಬಿಬಿಎಂಪಿ ಅಲ್ಲಿನ ಅಪಾರ್ಟ್ ಮೆಂಟ್ ನಿವಾಸಿಗಳಿಗೆ ಸ್ವಾಧೀನ ಪತ್ರ ನೀಡಲು ನಿರಾಕರಿಸಿತ್ತು. ಈ ಸಂಬಂಧ ನಿವಾಸಿಗಳು ಬಿಡಿಎಗೆ ದೂರು ಸಲ್ಲಿಸಿದ್ದರು. 2015ರ ಸೆಪ್ಟೆಂಬರ್ ನಲ್ಲಿ ಪ್ರದೇಶದ ಸರ್ವೆ ನಡೆಸಿದ್ದ ಬಿಡಿಎ, ಈ ಪ್ರದೇಶ ಸಂಪೂರ್ಣವಾಗಿ ಅರ್ಜಿದಾರರಾದ ನಿರ್ಮಾಣ ಸಂಸ್ಥೆಗೆ ಸೇರಿದ್ದು, ಅದನ್ನು ಅವರು ಕಾನೂನುಬದ್ಧವಾಗಿಯೇ ಖರೀದಿಸಿದ್ದಾರೆ ಎಂದು ವರದಿ ನೀಡಿತ್ತು. ಆದರೂ, ಬಿಬಿಎಂಪಿ ಸ್ವಾಧೀನ ಪತ್ರ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ನಾಕೋಡ ಕನ್ ಸ್ಟ್ರಕ್ಷನ್ ಕಂಪನಿ ಹೈಕೋರ್ಟ್ ಮೆಟ್ಟಿಲೇರಿದೆ.