ಮಾರ್ಚ್ 28ರಂದು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.30ರವರೆಗೆ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರು, ಬೆಂಬಲಿಗರು ಸಿ.ಆರ್. ಕಟ್ಟಡದ ಎದುರು ಜಮಾಯಿಸಿ ಆದಾಯ ತೆರಿಗೆ ಇಲಾಖೆಯ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯ ನೇತೃತ್ವವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಹಿಸಿದ್ದು, ಅಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ದಿನೇಶ್ ಗುಂಡೂರಾವ್, ಸಾ.ರಾ.ಮಹೇಶ್, ರಾಮಲಿಂಗಾ ರೆಡ್ಡಿ ಮತ್ತಿತರರು ಹಾಜರಿದ್ದರು..