ಬೆಂಗಳೂರು:ನಗರದಲ್ಲಿ ಭಾನುವಾರ ಬೆಳ್ಳಂಬೆಳಗ್ಗೆ ಸಂಭವಿಸಿದ ಅಪಘಾತದಲ್ಲಿ ಯಶವಂತಪುರ ಮೇಲ್ಸೇತುವೆಯಲ್ಲಿ ಅತಿ ವೇಗವಾಗಿ ಬರುತ್ತಿದ್ದ ಮಿನಿ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಕೆಳಗೆ ಬಿದ್ದ ಘಟನೆ ನಡೆದಿದೆ.
ಪ್ಲೈ ಓವರ್ನಿಂದ ಲಾರಿ ಕೆಳಕ್ಕೆ ಬಿದ್ದ ರಭಸಕ್ಕೆ ಲಾರಿ ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಚಾಲಕನಿಗೆ ಗಂಭೀರ ಗಾಯವಾಗಿದೆ. ಪುಣೆ ಕಡೆಯಿಂದ ಅಣಬೆ ತುಂಬಿಕೊಂಡು ಲಾರಿ ಬೆಂಗಳೂರಿಗೆ ಬರುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಯಶವಂತಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಕೇಸು ದಾಖಲಿಸಿಕೊಂಡಿದ್ದಾರೆ.