ಬೆಂಗಳೂರು: ಚುನಾವಣಾ ಸಂದರ್ಭದಲ್ಲಿ ವಿಶೇಷ ವಾಹನಗಳಲ್ಲಿ ಹಣ ಸಾಗಣೆ ಮಾಡಲಾಗುತ್ತದೆ ಎಂಬ ಆರೋಪಗಳಿಗೆ ಅವಕಾಶ ನೀಡದಿರಲು ನಿರ್ಧರಿಸಿರುವ ಬೆಂಗಳೂರು ನಗರದ ಮೂರು ಲೋಕಸಭಾ ಕ್ಷೇತ್ರಗಳಿಗೆ ಮಾದರಿ ನೀತಿ ಸಂಹಿತೆ ಜಾರಿಗೆ ನಿಯೋಜಿತರಾಗಿರುವ ವಿಶೇಷಾಧಿಕಾರಿ ಹಾಗೂ ಭೂ ಕಂದಾಯ - ಭೂಮಾಪನಾ ಇಲಾಖೆಯ ಆಯುಕ್ತ ಮೌನೀಶ್ ಮೌದ್ಗೀಲ್ ಅವರು, ಆಂಬುಲೆನ್ಸ್ ಮತ್ತು ಪೊಲೀಸ್ ವಾಹನಗಳನ್ನೂ ಸಹ ತಪಾಸಣೆಗೆ ಒಳಪಡಿಸುವಂತೆ ಆದೇಶಿಸಿದ್ದಾರೆ.