ಬೆಂಗಳೂರು: ಕರ್ನಾಟಕ ರಾಜ್ಯ ತಂಬಾಕು ವಿರೋಧಿ ದಳ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಂಬಾಕು ಬಳಕೆಯ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಲು ಬೆಂಗಳೂರು ನಗರ ಸೇರಿದಂತೆ ಎಲ್ಲಾ 30 ಜಿಲ್ಲೆಗಳಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಜಾರಿಗೆ ತರುತ್ತಿದೆ. ಅದೇ ರೀತಿ ಮತದಾನದ ದಿನ ಪ್ರತಿ ಮತಗಟ್ಟೆಯ 100 ಗಜದಷ್ಟು ದೂರದ ವ್ಯಾಪ್ತಿಯಲ್ಲಿ ತಂಬಾಕಿನ ಮಾರಾಟವನ್ನು ನಿಷೇಧಿಸಲು ಅವರು ಚುನಾವಣಾ ಆಯೋಗವನ್ನು ಕೋರಿದ್ದಾರೆ. ಇಂತಹಾ ನಿಷೇಧಿತ ಪ್ರದೇಶದಲ್ಲಿ ತಂಬಾಕು ಸೇವಿಸುವವರು ಹಾಗೂ ಮಾರಾಟ ಮಾಡುವ ಅಂಗಡಿ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ.